ಪ್ರಾಥಮಿಕ ಶಿಕ್ಷಣ ಮೂಲಭೂತ ಹಕ್ಕು: ಕೇಂದ್ರ ಸಂಪುಟ ನಿರ್ಧಾರ
ನವದೆಹಲಿ : ಪ್ರಾಥಮಿಕ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಲು ಕೇಂದ್ರಸಚಿವ ಸಂಪುಟ ಮಂಗಳವಾರ ನಿರ್ಧರಿಸಿದೆ. 6ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಮತ್ತು ಉಚಿತ ಶಿಕ್ಷಣ ನೀಡುವ ಮಹತ್ವದ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ತನ್ನ ಸಂಪೂರ್ಣ ಸಮ್ಮತಿ ನೀಡಿದೆ.
ಆರು ವರ್ಷದಿಂದ 14 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ಕೊಡಿಸುವುದನ್ನು ತಂದೆ - ತಾಯಿ- ಪೋಷಕರ ಪ್ರಾಥಮಿಕ ಕರ್ತವ್ಯವನ್ನಾಗಿ ಮಾಡಲು ಸಂವಿಧಾನಕ್ಕೂ ತಿದ್ದುಪಡಿ ತರಲು ಸಭೆ ನಿರ್ಧರಿಸಿದೆ. ಇದಕ್ಕಾಗಿ ಸಂವಿಧಾನದಲ್ಲಿ 21 ಎ ಪರಿಚ್ಛೇದವನ್ನು ಸೇರಿಸಲು ತೀರ್ಮಾನಿಸಲಾಗಿದ್ದು, 93ನೇ ತಿದ್ದುಪಡಿ ಮಸೂದೆಯನ್ನು ಬರುವ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು.
ಈ ವಿಷಯವನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಮೋದ್ ಮಹಾಜನ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಸಂವಿಧಾನದ 93ನೇ ತಿದ್ದುಪಡಿಯ 45ನೇ ವಿಧಿಯನ್ನು ಪರಿಷ್ಕರಿಸಿ ಎಳೆಯ ಮಕ್ಕಳಿಗೆ ಪಾಲನೆ ಮತ್ತು 14 ವರ್ಷದವರೆಗೆ ಅವರಿಗೆ ಕಡ್ಡಾಯ ಶಿಕ್ಷಣ ನೀಡುವ ಹೊಣೆಯನ್ನು ರಾಜ್ಯ ಸರಕಾರಗಳ ಮೇಲೆ ಹೊರಿಸಲಾಗುತ್ತಿದೆ.
ಈ ಸಂಬಂಧ ರಾಜ್ಯ ಸಭೆ ಮುಂದಿರುವ 1997ರ ಸಂವಿಧಾನದ 83ನೇ ತಿದ್ದುಪಡಿ ಮಸೂದೆಯನ್ನು ವಾಪಸ್ ಪಡೆಯಲೂ ಸಂಪುಟ ಸಭೆ ನಿರ್ಧರಿಸಿದೆ.
ತುಟ್ಟಿಭತ್ಯೆ : ಕೇಂದ್ರಸರಕಾರಿ ನೌಕರರಿಗೆ ಮತ್ತು ನಿವೃತ್ತ ನೌಕರರಿಗೆ ನೀಡುವ ತುಟ್ಟಿಭತ್ಯೆ ಪರಿಹಾರವನ್ನು ಶೇ. 2ರಷ್ಟು ಹೆಚ್ಚಿಸಲು ಸಭೆ ತೀರ್ಮಾನಿಸಿದೆ. ಜನವರಿ 1, 1996ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ.43ರಿಂದ 45ಕ್ಕೆ ಏರಿಸಲಾಗಿದೆ. ಇದರಿಂದ ಬೊಕ್ಕಸಕ್ಕೆ ವಾರ್ಷಿಕ 791 ಕೋಟಿ ರುಪಾಯಿ ಹೆಚ್ಚುವರಿ ಹೊರೆ ಬೀಳಲಿದೆ ಎಂದು ಮಹಾಜನ್ ತಿಳಿಸಿದ್ದಾರೆ.(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications