Get Updates
Get notified of breaking news, exclusive insights, and must-see stories!

ಹುಣಸೂರು ಅರಣ್ಯದಿಂದ ದಸರೆಗೆ ಬಂದ ಬಲರಾಮಬಳಗಕ್ಕೆ ಸ್ವಾಗತ

ಮೈಸೂರು : ನಾಡದೇವಿ ಚಾಮುಂಡೇಶ್ವರಿಯನ್ನು ಮೆರೆಸುವ ಚಿನ್ನದ ಅಂಬಾರಿಯನ್ನು ಹೊರುವ ಬಲರಾಮನ ಸಮೇತ ದಸರೆ ಉತ್ಸವದಲ್ಲಿ ಪಾಲ್ಗೊಳ್ಳಲು ಮೊದಲ ಕಂತಿನಲ್ಲಿ ಆಗಮಿಸಿದ 5 ಆನೆಗಳಿಗೆ ಅರಮನೆಯ ಆವರಣದಲ್ಲಿ ಗುರುವಾರ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು.

ಪುಷ್ಪವೃಷ್ಟಿ ಹಾಗೂ ಮಂಗಳವಾದ್ಯಗಳೊಂದಿಗೆ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಈ ಮುನ್ನ ಹುಣಸೂರು ಅರಣ್ಯದಿಂದ ಆನೆಗಳು ಹೊರಡುವಾಗ ಅವುಗಳಿಗೆ ಕಾಯಿ ಬೆಲ್ಲ ನೀಡುವ ಮೂಲಕ ಬೀಳ್ಕೊಡಲಾಯಿತು. ಆನೆಗಳನ್ನು ಸ್ವಾಗತಿಸುವ ಕಾರ್ಯಕ್ರಮದಲ್ಲಿ ಹಾಜರಿದ್ದ ವಾರ್ತಾ ಸಚಿವ ಎಂ. ಶಿವಣ್ಣ ಅವರು ಈ ಬಾರಿಯ ದಸರೆಯನ್ನು ಅತ್ಯಂತ ಸರಳವಾಗಿ ಆಚರಿಸಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯದಲ್ಲಿ ಬರಗಾಲದ ಕರಾಳ ಛಾಯೆ ಕಾಣಿಸಿಕೊಂಡಿರು ಹಿನ್ನೆಲೆಯಲ್ಲಿ ದಸರೆಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಆದರೆ ಸಾಂಪ್ರದಾಯಿಕ ಆಚರಣೆಗಳನ್ನು ಮೊಟಕುಗೊಳಿಸುವುದಿಲ್ಲ ಎಂದು ಶಿವಣ್ಣ ಹೇಳಿದರು. ಆನೆಗಳ ಆಗಮನದೊಂದಿಗೆ ದಸರೆ ಪ್ರಾರಂಭದ ಕಾಲಕ್ಕೆ ರಾಜ್ಯದಲ್ಲಿ ಮಳೆ ಕಾಣಿಸಿಕೊಂಡಿರುವ ಬಗ್ಗೆ ಸಚಿವರು ಸಂತೋಷ ವ್ಯಕ್ತಪಡಿಸಿದರು.

(ಇನ್ಫೋ ವಾರ್ತೆ)

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+