ಓ. ಪನ್ನಿರ ಸೆಲ್ವಂ ತಮಿಳುನಾಡಿನ ನೂತನ ಮುಖ್ಯಮಂತ್ರಿ
ಚೆನ್ನೈ : ಎ.ಐ.ಎ.ಡಿ.ಎಂ.ಕೆ ಶಾಸಕ ಓ. ಪನ್ನೀರ ಸೆಲ್ವಂ ಶುಕ್ರವಾರ ರಾತ್ರಿ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಹಾಗೂ ಸಂಭ್ರಮ ರಹಿತ ಕಾರ್ಯಕ್ರಮದಲ್ಲಿ ಸೆಲ್ವಂ ಅವರಿಗೆ, ರಾಜ್ಯಪಾಲರಾದ ರಂಗರಾಜನ್ ಪ್ರಮಾಣ ವಚನ ಭೋದಿಸಿದರು.
ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಸೆಲ್ವಂ, ಜಯಲಲಿತಾ ಅವರ ಆಪ್ತ ಗೆಳತಿ ಶಶಿಕಲಾ ಅವರ ಬೆಂಬಲದಿಂದ ಜಯಾ ಸಚಿವ ಸಂಪುಟದಲ್ಲಿ ಕಂದಾಯ ಸಚಿವರಾಗಿದ್ದರು. ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಜಯಾ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ 10ರಲ್ಲಿ ಒಬ್ಬರಾಗಿದ್ದ ಸೆಲ್ವಂ ಇದ್ದಕ್ಕಿದ್ದಂತೆ ನಂ1 ಆದರು.
ಥೇವಾರಂ ಜನಾಂಗಕ್ಕೆ ಸೇರಿದವರಾದ ಸೆಲ್ವಂ ತಮಿಳುನಾಡಿನ ದಕ್ಷಿಣ ಭಾಗದಿಂದ ಆಯ್ಕೆಯಾಗಿ ಮುಖ್ಯಮಂತ್ರಿ ಪದಕ್ಕೇರಿದ ಎರಡನೇ ವ್ಯಕ್ತಿ. ಇದಕ್ಕೆ ಮುನ್ನ ಕೆ. ಕಾಮರಾಜ್ ಅವರು ಮಾತ್ರ ಈ ಗೌರವಕ್ಕೆ ಪಾತ್ರರಾಗಿದ್ದರು. ಜಯಾ ರಾಜೀನಾಮೆ ನಂತರ ನಡೆದ ಎ.ಐ.ಎ.ಡಿ.ಎಂ.ಕೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಸೆಲ್ವಂ ಅವರನ್ನು ನಾಯಕನಾಗಿ ಆರಿಸಲಾಯಿತು.
ಸೆಲ್ವಂ ಅವರು ಶಶಿಕಲಾ ಅವರ ಪತಿ ಟಿ.ಟಿ.ವಿ. ದಿನಕರನ್ ಅವರ ಪರಮಾಪ್ತರು. ರೈತ ಕುಟುಂಬದಲ್ಲಿ ಹುಟ್ಟಿದ ಪನ್ನೀರ ಸೆಲ್ವಂರಿಗೆ ಇದು ಬಯಸದೇ ಬಂದ ಭಾಗ್ಯ. ಶುಕ್ರವಾರ ಸೆಲ್ವಂ ಅವರೊಂದಿಗೆ 24 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
(ಪಿ.ಟಿ.ಐ/ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications