ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಶಿವಮೊಗ್ಗದಲ್ಲಿ ಐ.ಟಿ. ಬೆಳವಣಿಗೆಗೆ ವಿಫುಲ ಅವಕಾಶವಿದೆ : ಬಿಕೆಸಿ
ಶಿವಮೊಗ್ಗ : ಮಲೆನಾಡ ಮಡಿಲ ಶಿವಮೊಗ್ಗದಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ ತಲೆ ಎತ್ತಿದೆ. ರಾಜ್ಯದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರೊ. ಬಿ.ಕೆ. ಚಂದ್ರಶೇಖರ್ ಈ ಕೇಂದ್ರವನ್ನು ಉದ್ಘಾಟಿಸಿದರು. ಮಾಹಿತಿ ತಂತ್ರಜ್ಞಾನ ಬೆಳವಣಿಗೆಯಿಂದ ರಾಷ್ಟ್ರದ ಪ್ರಗತಿ ಸಾಧ್ಯ ಎಂದು ಅವರು ಹೇಳಿದರು.
ಶಿವಮೊಗ್ಗದಲ್ಲಿ ಮಾಹಿತಿ ತಂತ್ರಜ್ಞಾನ ಅಭಿವೃದ್ಧಿಗೆ ವಿಫುಲ ಅವಕಾಶ ಇದೆ ಎಂದೂ ಚಂದ್ರಶೇಖರ್ ಹೇಳಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವರಾದ ಕಾಗೋಡು ತಿಮ್ಮಪ್ಪ, ಭಾರತೀಯ ಜನತಾಪಕ್ಷದ ಡಿ.ಎಚ್. ಶಂಕರಮೂರ್ತಿ , ಕ್ಷೇತ್ರದ ಶಾಸಕರು, ಅಧಿಕಾರಿಗಳು ಪಾಲ್ಗೊಂಡಿದ್ದರು.
Story first published: Wednesday, September 26, 2001, 5:30 [IST]