ಬೆಂಗಳೂರು, ಮಂಗಳೂರು, ಕೋಲಾರ ಜನತೆಯನ್ನು ನಡುಗಿಸಿದ ಭೂಮಿ
ಬೆಂಗಳೂರು : ರಾಜ್ಯದ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳು, ಮಂಗಳೂರು, ಕೋಲಾರಗಳಲ್ಲಿ ಮಂಗಳವಾರ ರಾತ್ರಿ ಭೂಕಂಪ ಸಂಭವಿಸಿದೆ. ಆಂಧ್ರ ಪ್ರದೇಶ, ತಮಿಳುನಾಡು, ಮಾಹಾರಾಷ್ಟ್ರ, ಕೇರಳ ಹಾಗೂ ಪುದುಚೇರಿಯಲ್ಲೂ ಭೂಕಂಪ ಸಂಭವಿಸಿದೆ. ಆದರೆ, ಯಾವ ಪ್ರದೇಶದಿಂದಲೂ ಸಾವು ನೋವಿನ ವರದಿಯಾಗಿಲ್ಲ .
ಬೆಂಗಳೂರಿನ ಮಲ್ಲೇಶ್ವರ, ಕೆ.ಪಿ.ಅಗ್ರಹಾರ, ಪದ್ಮನಾಭನಗರ, ಬನಶಂಕರಿ, ವಿಲ್ಸನ್ ಗಾರ್ಡನ್, ಹನುಮಂತ ನಗರ, ಸಿ.ವಿ.ರಾಮನ್ ನಗರ, ಸಂಜಯನಗರ, ಮಹಾತ್ಮಗಾಂಧಿ ರಸ್ತೆ, ತಾವರೆಕೆರೆ, ಐಟಿಐ ಕಾಲೊನಿ, ಹೆಸರಘಟ್ಟ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ರಾತ್ರಿ 8.45 ರ ವೇಳೆಯಲ್ಲಿ ಭೂಮಿ ಕಂಪಿಸಿದೆ. ಭೂಕಂಪದ ಕೇಂದ್ರ ಗೌರಿಬಿದನೂರಿನ ನೈರುತ್ಯ ದಿಕ್ಕಿಗೆ 260 ಕಿಮೀ ದೂರದಲ್ಲಿತ್ತು ಎಂದು ಭಾಬಾ ಅಣು ಸಂಶೋಧನಾ ಕೇಂದ್ರದ ಮೂಲಗಳು ತಿಳಿಸಿವೆ.
ವಿಧಾನಸೌಧದಲ್ಲೂ ಭೂಕಂಪದ ಅನುಭವ ಕಂಡು ಬಂದಿದೆ. ಭೂಮಿ ನಡುಗಿದ್ದರಿಂದ ಭಯಭೀತರಾದ ಜನ ಕಟ್ಟಡಗಳಿಂದ ಹೊರಬಂದು ರಸ್ತೆಗಳಲ್ಲಿ ಆಶ್ರಯಪಡೆದಿದ್ದರು. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5 ರಷ್ಟಿತ್ತು ಎಂದು ಭಾಬಾ ಕೇಂದ್ರದ ಮೂಲಗಳು ತಿಳಿಸಿದ್ದರೆ, ನವದೆಹಲಿಯ ಭಾರತೀಯ ಹವಾಮಾನ ಇಲಾಖೆ ಈ ಕಂಪನ 5.8 ರಷ್ಟಿತ್ತು ಎಂದಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications