ಜೋಗದ ಸಿರಿ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಇಲ್ಲ
ಬೆಂಗಳೂರು : ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ರಾಜಾ, ರಾಣಿ, ರೋರರ್, ರ್ಯಾಕೆಟ್ಗಳ ಅರ್ಭಟವೂ ಕ್ಷೀಣಿಸಿತ್ತು. ರಾಜ್ಯದಲ್ಲಿ ಹಿಂಗಾರು ಚುರುಕಾದ ಬಳಿಕ ಈಹೊತ್ತು ಜೊಗ ಜಲಪಾತ ಕೊಂಚ ಮೈದುಂಬಿ ಧುಮ್ಮಿಕ್ಕುತ್ತಿದೆ.
ಆದರೆ, ಇದನ್ನು ನೋಡುವ ಭಾಗ್ಯ ಪ್ರವಾಸಿಗರಿಗೆ ಇಲ್ಲ ಅಷ್ಟೇ. ಅಮೆರಿಕದಲ್ಲಿ ನಡೆದ ವಿಧ್ವಂಸಕ ದಾಳಿಯ ಕರಿನೆರಳು ಜೋಗಕ್ಕೂ ಮುಸುಕಿದೆ. ಭದ್ರತೆಯ ದೃಷ್ಟಿಯಿಂದ ಜೋಗದ ರಮಣೀಯತೆಯ ಸವಿಯಲು ಪ್ರವಾಸಿಗರಿಗೆ ತಡೆಯಾಡ್ಡಲಾಗಿದೆ.
ಈ ವಿಷಯವನ್ನು ಕರ್ನಾಟಕ ವಿದ್ಯುತ್ ನಿಗಮದ ವಕ್ತಾರರು ತಿಳಿಸಿದ್ದಾರೆ. ಆದರೆ, ವಿದ್ಯಾರ್ಥಿಗಳು, ಪೂರ್ವಾನುಮತಿ ಪಡೆದ ವಿದೇಶೀ ಪ್ರವಾಸಿಗರು ಹಾಗೂ ಕೆಲವು ಗಣ್ಯರಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ. ಸಾಮಾನ್ಯ ಪ್ರವಾಸಿಗರಿಗೆ ಮಾತ್ರ ಅನಿರ್ದಿಷ್ಟಾವಧಿವರೆಗೆ ಪ್ರವೇಶಾವಕಾಶ ನಿಷೇಧಿಸಲಾಗಿದೆ.
ವಿದ್ಯಾರ್ಥಿಗಳಿಗೆ ರಿಯಾಯಿತಿ : ಶೈಕ್ಷಣಿಕ ಪ್ರವಾಸಕ್ಕಾಗಿ ಜೋಗ ಮತ್ತು ಶರಾವತಿ ವಿದ್ಯುತ್ ಯೋಜನೆಯ ವೀಕ್ಷಣೆಗೆ ಬರುವ ಮಕ್ಕಳಿಗೆ ರಿಯಾಯಿತಿ ನೀಡಲಾಗಿದೆ. ಆದರೆ, ಇವರು, ತಮ್ಮ ಶಾಲೆಯ ಮುಖ್ಯಸ್ಥರಿಂದ ಪತ್ರತಂದು, ಪೂರ್ವಾನುಮತಿ ಪಡೆಯಬೇಕು. ಆದರೆ, ವಿದ್ಯಾರ್ಥಿಗಳಿಗೆ ಕೂಡ ಟ್ರಾಲಿಯಲ್ಲಿ ಕೆಳಗಿಳಿದು ವಿದ್ಯುತ್ ಘಟಕ ವೀಕ್ಷಿಸುವ ಅವಕಾಶ ನಿರಾಕರಿಸಲಾಗಿದೆ.
ಇದೇ ರೀತಿ ರಾಯಚೂರು ಥರ್ಮಲ್ ವಿದ್ಯುತ್ ಘಟಕ, ಕಾಳಿಯೋಜನೆ ಮತ್ತು ವಾರಾಹಿಗಳಿಗೂ ನಿರ್ಬಂಧ ಅನ್ವಯಿಸುತ್ತದೆ. ಗೃಹಇಲಾಖೆಯಿಂದ ಅನುಮತಿಪಡೆದ ಸಾಗರೋತ್ತರ ವಿದ್ಯಾರ್ಥಿಗಳಿಗೆ ಜೋಗದ ವೀಕ್ಷಣೆಗೆ ಅವಕಾಶ ನೀಡಲಾಗುವುದು ಎಂದು ಕೆಪಿಸಿಯ ವಕ್ತಾರರು ರಾಜ್ಯದ ಆಂಗ್ಲ ಪತ್ರಿಕೆಯಾಂದಕ್ಕೆ ತಿಳಿಸಿದ್ದಾರೆ. ಈ ಮಧ್ಯೆ ಏಷ್ಯಾದ ಪ್ರಪ್ರಥಮ ಜಲವಿದ್ಯುತ್ ಯೋಜನೆಯಾದ ಶಿಂಷಾ ಸೇರಿದಂತೆ ರಾಜ್ಯದ ಎಲ್ಲ ವಿದ್ಯುತ್ ಉತ್ಪಾದನಾ ಘಟಕಗಳಲ್ಲೂ ಬಿಗಿ ಭದ್ರತೆಗೆ ಸೂಚಿಸಲಾಗಿದೆ.
ವಾರ್ತಾ ಸಂಚಯ
ಮುಖಪುಟ / ನೋಡು ಬಾ ನಮ್ಮೂರ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications