ಆಂಧ್ರದ ಮಾಜಿ ಮುಖ್ಯಮಂತ್ರಿ ಕೋಟ್ಲಾ ವಿಜಯ ಭಾಸ್ಕರ್ರೆಡ್ಡಿ ಇನ್ನಿಲ್ಲ
ಹೈದರಾಬಾದ್ : ಕಾಂಗ್ರೆಸ್ನ ಹಿರಿಯ ಮುತ್ಸದ್ಧಿ, ಸ್ವಾತಂತ್ರ್ಯ ಹೋರಾಟಗಾರ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೋಟ್ಲಾ ವಿಜಯ ಭಾಸ್ಕರ ರೆಡ್ಡಿ ಗುರುವಾರ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.
ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಕಾರಣ ಕಳೆದ ತಿಂಗಳು ಅವರನ್ನು ಅಪೊಲೋ ಆಸ್ಪತ್ರೆಗೆ ಸೇರಿಸಲಾಗಿತ್ತು. ದೀರ್ಘ ಕಾಲದ ಅಸ್ವಸ್ಥತೆಯ ನಂತರ ಗುರುವಾರ ಆಸ್ಪತ್ರೆಯಲ್ಲೇ ಅವರು ಕೊನೆಯುಸಿರೆಳೆದರು. ಲೋಕಸಭೆಗೆ ಆರು ಬಾರಿ ಆಯ್ಕೆಯಾಗಿರುವ ವಿಜಯ ಭಾಸ್ಕರ್ ರೆಡ್ಡಿ, ಸಿಡಬ್ಲ್ಯುಸಿ ಸದಸ್ಯರಾಗಿದ್ದರು. ಪಕ್ಷದ ಶಿಸ್ತು ಕ್ರಿಯಾ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ರಾಷ್ಟ್ರೀಯ ರಾಜಕಾರಣದಲ್ಲಿ ಕಾಂಗ್ರೆಸ್ನಲ್ಲಿ ಹೆಸರು ಮಾಡಿದ ಇವರು ಎರಡು ಅವಧಿಯಲ್ಲಿ (1982-82 ಮತ್ತು 1992-94) ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದವರು.
ಮೃತರು ಪತ್ನಿ, ಮೂವರು ಹೆಣ್ಣು ಮಕ್ಕಳು ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಗಂಡು ಮಕ್ಕಳ ಪೈಕಿ ಕೆ.ಸೂರ್ಯಪ್ರಕಾಶ್ ಪ್ರಸ್ತುತ ಕರ್ನೂಲ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು. ಮಾಜಿ ಸಂಸದರೂ ಹೌದು. ರಾಯಲಸೀಮಾ ಶಕ್ತಿವಂತ ಎಂದು ರಾಜಕೀಯ ವಲಯದಲ್ಲಿ ಗುರ್ತಿಸಿಕೊಂಡ ವಿಜಯ ಭಾಸ್ಕರ್ ರೆಡ್ಡಿ ಅವರಿಗೆ ಆಂಧ್ರಪ್ರದೇಶದಲ್ಲಿ ಶ್ರದ್ಧಾಂಜಲಿಯ ಮಹಾಪೂರ ಹರಿದುಬರುತ್ತಿದೆ.
ಚಂದ್ರಬಾಬು ಶ್ರದ್ಧಾಂಜಲಿ : ಕೋಟ್ಲಾ ವಿಜಯ ಭಾಸ್ಕರ್ ರೆಡ್ಡಿ ಸಾವನ್ನು ಒಂದು ಶಾಕ್ ಎಂದು ಹೇಳಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ದೇಶ ಒಬ್ಬ ದಕ್ಷ ಆಡಳಿತಕಾರನನ್ನು ಕಳಕೊಂಡಿದೆ ಎಂದಿದ್ದಾರೆ.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications