ಶೀಘ್ರವೇ ಐ.ಟಿ - ಟೆಲಿಕಾಂ ಸಚಿವಾಲಯಗಳ ವಿಲೀನ: ಮಹಾಜನ್
ನವದೆಹಲಿ : ತಮ್ಮ ವ್ಯಾಪ್ತಿಯಲ್ಲಿರುವ ಸಂಪರ್ಕ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯಗಳೆರಡನ್ನೂ ವಿಲೀನಗೊಳಿಸುವ ಇಂಗಿತವನ್ನು ಕೇಂದ್ರ ಸಚಿವ ಪ್ರಮೋದ್ ಮಹಾಜನ್ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ತಾವು ಈಗಾಗಲೇ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅನುಮತಿ ಕೋರಿರುವುದಾಗಿಯೂ ಅವರು ಹೇಳಿದ್ದಾರೆ.
ರಾಮ್ ವಿಲಾಸ್ ಪಾಸ್ವಾನ್ ಅವರ ಬಳಿಯಿದ್ದ ಸಂಪರ್ಕ ಖಾತೆಯನ್ನು ಪ್ರಮೋದ್ ಮಹಾಜನ್ ಅವರಿಗೆ ವಹಿಸಿಕೊಟ್ಟ ಒಂದು ತಿಂಗಳ ಅವಧಿಯಾಳಗೇ ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ತಾವು ಈ ಎರಡೂ ಸಚಿವಾಲಯನ್ನು ವಿಲೀನಗೊಳಿಸುವ ನಿರ್ಧಾರ ಕೈಗೊಂಡಿದ್ದು, ಐ.ಟಿ. ಮತ್ತು ಟೆಲಿಕಾಂಗಳನ್ನು ಒಂದುಗೂಡಿಸಲು ಪ್ರಧಾನಿಯವರನ್ನು ಕೋರಿರುವುದಾಗಿ ಅವರು ಹೇಳಿದ್ದಾರೆ.
ಈ ಎರಡೂ ಸಚಿವಾಲಯಗಳನ್ನು ವಿಲೀನಗೊಳಿಸಿ, ಒಂದೇ ಸಚಿವಾಲಯ ಮಾಡುವುದರಿಂದ ಭಾರಿ ಸುಧಾರಣೆಯನ್ನೇ ನಿರೀಕ್ಷಿಸಬಹುದಾಗಿದೆ. ಇದು ವಿಶ್ವಆರ್ಥಿಕ ಹಿನ್ನಡೆಯನ್ನು ಸಮರ್ಥವಾಗಿ ನಿಭಾಯಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ಜಾಗತಿಕ ಟೆಲಿಕಾಂ ಶೃಂಗ 2001ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು, ಸಂವಹನದ ಎರಡೂ ಇಲಾಖೆಗಳನ್ನು ಪ್ರತ್ಯೇಕವಾಗಿಡುವುದು ಸೂಕ್ತವಲ್ಲ. ಈ ಎರಡನ್ನೂ ಒಂದೇ ಸಚಿವಾಲಯದಡಿ ತರಬೇಕು ಎಂದರು. ತಮ್ಮ ಈ ಇಂಗಿತಕ್ಕೆ ಪ್ರಧಾನಿಯವರು ಸಮ್ಮತಿಸುತ್ತಾರೆ ಎಂಬ ಆಶಾಭಾವನೆ ವ್ಯಕ್ತಪಡಿಸಿದ ಅವರು, ಒಂದೆರಡು ವಾರದಲ್ಲೇ ಇದು ಕೈಗೂಡುತ್ತದೆ ಎಂದರು.
ಪ್ರಸ್ತುತ ಐ.ಟಿ. ಹಾಗೂ ಟೆಲಿಕಾಂಗೆ ಪ್ರತ್ಯೇಕವಾದ ರಾಷ್ಟ್ರೀಯ ಸಲಹಾ ಸಮಿತಿಗಳಿವೆ. ವಿಲೀನ ಪ್ರಕ್ರಿಯೆ ಕಾರ್ಯರೂಪಕ್ಕೆ ಬಂದ ಕೂಡಲೇ ಒಂದೇ ಸಮಾಲೋಚನಾ ಸಮಿತಿ ಹಾಗೂ ರಾಷ್ಟ್ರೀಯ ಸಲಹಾ ಸಮಿತಿಯನ್ನು ರಚಿಸಲಾಗುವುದು ಎಂದು ಮಹಾಜನ್ ಹೇಳಿದರು.
(ಪಿ.ಟಿ.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications