ನಾಟಕ ಅಕಾಡೆಮಿ ಅಧ್ಯಕ್ಷ ನಾಗೇಶ್ ಹಲ್ಲು ಮುರಿದ ವರ್ತಕರು
ಬೆಂಗಳೂರು : ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಕೆಲವು ವ್ಯಾಪಾರಸ್ಥರು ಗದ್ದಲ ಎಬ್ಬಿಸಿದ್ದನ್ನು ಪ್ರತಿಭಟಿಸಿದ ನಾಟಕ ಅಕಾಡೆಮಿ ಅಧ್ಯಕ್ಷ ನಾಗೇಶ್ ಅವರ ಮೇಲೆ ದಾರುಣ ಹಲ್ಲೆ ನಡೆದಿದೆ.
3 ದಿನಗಳ ಕಾಲ ಹಳೆಯ ನಾಟಕಗಳ ಉತ್ಸವದ ಎರಡನೇ ದಿನ ಗುರುವಾರ, ಟಿ.ಎನ್.ಸೀತಾರಾಂ ಅವರ ನಮ್ಮೊಳಗೊಬ್ಬ ನಾಜೂಕಯ್ಯ ನಾಟಕ ಪ್ರದರ್ಶನ ಏರ್ಪಾಟಾಗಿತ್ತು. ಸಂಜೆಯಿಂದಲೇ ಸಾಕಷ್ಟು ಸಂಖ್ಯೆಯಲ್ಲಿ ರಂಗಾಸಕ್ತರು ಸೇರುತ್ತಿದ್ದರು. ಅದೇ ಸಮಯದಲ್ಲಿ ನಯನ ಸಭಾಂಗಣದಲ್ಲಿ ಕೆಲವು ವರ್ತಕರ ಖಾಸಗಿ ಸಮಾರಂಭ ಏರ್ಪಾಟಾಗಿತ್ತು. ಅದು ಸಮಾರಂಭ ಎನ್ನುವುದಕ್ಕಿಂತ ಮೋಜಿನ ಪರಾಕಾಷ್ಠೆಯಾಯಿತು.
ಆ ಕಾರ್ಯಕ್ರಮಕ್ಕೆ ಬಂದ ಅನೇಕರು ಕಾರುಗಳನ್ನು ಕಲಾಕ್ಷೇತ್ರದ ಆವರಣದಲ್ಲಿ ಜನರಿಗೆ ತೊಂದರೆ ಆಗುವಂತೆ ನಿಲ್ಲಿಸಿದರು. ಸಾಲದ್ದಕ್ಕೆ ಧ್ವನಿವರ್ಧಕವನ್ನು ಕಿವಿಗಡಚಿಕ್ಕುವಂತೆ ಹಾಕಿದರು. ನಾಟಕ ಅಕಾಡೆಮಿ ಅಧ್ಯಕ್ಷ ನಾಗೇಶ್ ಇದನ್ನು ಪ್ರತಿಭಟಿಸಿ, ಗೊಂದಲ ನಿಲ್ಲಿಸುವಂತೆ ಕೋರಿದರು. ಇದಕ್ಕೆ ಅವರಿಗೆ ಸಿಕ್ಕ ಬಹುಮಾನ ಹಲ್ಲುಮುರಿತ ! ನಾಗೇಶ್ ಅವರ ಮೋರೆಗೆ ವರ್ತಕರು ಎಗ್ಗಿಲ್ಲದ್ದೆ ಹೊಡೆದರು. ನಾಗೇಶ್ ಅವರ ತುಟಿ ಸೀಳಿದ್ದು, ಕೆಲವು ಹಲ್ಲುಗಳೂ ಉದುರಿದವು. ಈ ಕೆಲಸ ಮಾಡಿದವರು ಮನಿ ಚೈನ್ ಲಿಂಕ್ಸ್ ಯೋಜನೆಯ ಪ್ರವರ್ತಕರಾಗಿದ್ದು, ಮದ್ಯಪಾನ ಮಾಡಿದ್ದರು ಎನ್ನಲಾಗಿದೆ.
ಪ್ರತಿಭಟನೆ : ನಾಟಕ ಅಕಾಡೆಮಿ ಅಧ್ಯಕ್ಷ ನಾಗೇಶ್ ಮೇಲಿನ ಹಲ್ಲೆಯನ್ನು ರಂಗಭೂಮಿ ಕ್ರಿಯಾ ಸಮಿತಿ ತೀವ್ರವಾಗಿ, ಖಂಡಿಸಿದ್ದು, ಶುಕ್ರವಾರ ಸಂಜೆ ಈ ದೃಷ್ಕುೃತ್ಯದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಸಮಿತಿಯ ಅಧ್ಯಕ್ಷ ಸಿ.ಜಿ.ಕೃಷ್ಣಸ್ವಾಮಿ ಹೇಳಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications