ತಾಲಿಬಾನ್ ಮನವೊಲಿಸಲು ಪಾಕ್ ಪ್ರಯತ್ನ ವ್ಯರ್ಥ,ಯುದ್ಧ ಸನ್ನಿಹಿತ
ಇಸ್ಲಮಾಬಾದ್/ವಾಷಿಂಗ್ಟನ್: ಸಂಭವನೀಯ ಯುದ್ಧವನ್ನು ತಪ್ಪಿಸಿಕೊಳ್ಳಲು ಮುಂದಾಗುವಂತೆ ತಾಲಿಬಾನ್ ಆಡಳಿತದ ಮನವೊಲಿಸಲು ಆಪ್ಘಾನಿಸ್ತಾನಕ್ಕೆ ತೆರಳಿದ್ದ ಪಾಕಿಸ್ತಾನದ ನಿಯೋಗ ತನ್ನ ಪ್ರಯತ್ನದಲ್ಲಿ ವಿಫಲವಾಗಿದೆ. ಈ ನಡುವೆ ಆಪ್ಘಾನಿಸ್ತಾನದ ಮೇಲೆ ದಾಳಿ ನಡೆಸಲು ಅಮೆರಿಕಾ ಹಾಗೂ ಇಂಗ್ಲೆಂಡ್ ಪಡೆಗಳು ಅಂತಿಮ ಸಿದ್ಧತೆ ಮಾಡಿಕೊಳ್ಳುತ್ತಿವೆ ಎಂದು ಸಿಎನ್ಎನ್ ವರದಿ ಮಾಡಿದೆ.
ಶುಕ್ರವಾರ ತಾಲಿಬಾನ್ನ ಮುಖ್ಯಸ್ಥ ಮುಲ್ಲಾ ಮೊಹಮದ್ ಓಮರ್ ಅವರೊಂದಿಗೆ ಮಾತುಕತೆ ನಡೆಸಿ ಕಾಂದಹಾರ್ನಿಂದ ವಾಪಸ್ಸಾದ ಪಾಕಿಸ್ತಾನಿ ಧಾರ್ಮಿಕ ನಾಯಕರ ನಿಯೋಗ ತಮ್ಮ ಮಧ್ಯಸ್ಥಿಕೆ ವಿಫಲವಾದ ಬಗ್ಗೆ ತಿಳಿಸಿದೆ. ಐಎಸ್ಐ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮೆಹಮೂದ್ ಅಹ್ಮದ್ ಸೇರಿದಂತೆ 10 ಮಂದಿ ಸದಸ್ಯರನ್ನು ಈ ನಿಯೋಗ ಒಳಗೊಂಡಿತ್ತು .
ಒಸಾಮ ಬಿನ್ ಲ್ಯಾಡೆನ್ ಒಪ್ಪಿಸಲು ನೈತಿಕ ಅಥವಾ ಧಾರ್ಮಿಕ ನೆಲೆಯಲ್ಲಿ ಅವಕಾಶವಿಲ್ಲ ಎಂದು ಪಾಕ್ ನಿಯೋಗಕ್ಕೆ ತಾಲಿಬಾನ್ ಸ್ಪಷ್ಟ ಮಾತುಗಳಲ್ಲಿ ತಿಳಿಸಿದೆ. ಯುದ್ಧ ತಪ್ಪಿಸುವ ನಿಟ್ಟಿನಲ್ಲಿ ಒಂದೇ ವಾರದಲ್ಲಿ ತಾಲಿಬಾನ್ ಜೊತೆ ಪಾಕಿಸ್ತಾನ ನಡೆಸುತ್ತಿರುವ ಎರಡನೇ ಮಾತುಕತೆ ಇದಾಗಿದೆ.
(ಏಜೆನ್ಸೀಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications