ಮೈಸೂರು ದಸರಾ ಮಹೋತ್ಸವಕ್ಕೆ ಒಡೆಯರ್ಗೆ ಸರ್ಕಾರದ ಆಹ್ವಾನ
ಮೈಸೂರು : ಅಕ್ಟೋಬರ್ 26ರಂದು ನಡೆಯುವ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ರಾಜ್ಯ ಸರಕಾರದ ಪರವಾಗಿ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಅವರು ಮೈಸೂರು ರಾಜ ಮನೆತನದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ವಿಶ್ವವಿಖ್ಯಾತ ಜಂಬೂಸವಾರಿಗಾಗಿ ಚಿನ್ನದಂಬಾರಿಯನ್ನು ನೀಡುವಂತೆ ಮನವಿ ಮಾಡಿದ ಅವರು, ಅದಕ್ಕಾಗಿ ಸರಕಾರ ವತಿಯಿಂದ ನೀಡುವ ಗೌರವಧನ ಹಾಗೂ ಫಲತಾಂಬೂಲವನ್ನು ಒಡೆಯರ್ ಅವರಿಗೆ ನೀಡಿದರು. ಫಲತಾಂಬೂಲ ಹಾಗೂ ಸರಕಾರ ನೀಡಿದ ಗೌರವಧನವನ್ನು ಸ್ವೀಕರಿಸಿದ ಒಡೆಯರ್, ರಾಜ್ಯದ ಬರ ಕಾಮಗಾರಿಗೆ ಆ ಹಣವನ್ನು ವಿನಿಯೋಗಿಸುವಂತೆ ತಿಳಿಸಿ, ಸರಕಾರಕ್ಕೇ ಹಿಂತಿರುಗಿಸಿದರು.
ಈ ಸಂದರ್ಭದಲ್ಲಿ ಮೈಸೂರು ಮೇಯರ್ ಬಿ.ಕೆ. ಪ್ರಕಾಶ್, ಜಿಲ್ಲಾಧಿಕಾರಿ ಬಿ. ಬಸವರಾಜು, ವಿಭಾಗಾಧಿಕಾರಿ ಭಾಸ್ಕರ್, ಪಾಲಿಕೆ ಆಯುಕ್ತರಾದ ಶಂಕರ್ ಮೊದಲಾದವರು ಹಾಜರಿದ್ದರು. ಆನಂತರ ಪತ್ರಕರ್ತರೊಂದಿಗೆ ಮಾತನಾಡಿದ ವಿಶ್ವನಾಥ್ ಬರದ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ದಸರಾ ಆಚರಿಸಲಾಗುವುದು. ಇದಕ್ಕಾಗಿ ಕೇವಲ 10 ಲಕ್ಷ ರುಪಾಯಿ ಖರ್ಚು ಮಾಡಲಾಗುತ್ತಿದೆ ಎಂದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications