ಪ್ರತಿಭಟನೆಗೆ ಮಣಿದ ಸರ್ಕಾರ, ಬಯೋಟೆಕ್ ಪಾರ್ಕ್ ಸ್ಥಳಾಂತರ
ಬೆಂಗಳೂರು : ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ಜೈವಿಕ ತಂತ್ರಜ್ಞಾನ ಉದ್ಯಾನವನ್ನು ಉದ್ದೇಶಿತ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ) ಪ್ರದೇಶದಿಂದ ಸ್ಥಳಾಂತರಿಸಲು ರಾಜ್ಯ ಸರ್ಕಾರ ಯೋಚಿಸುತ್ತಿದೆ ಎಂದು ಕೃಷಿ ಸಚಿವ ಟಿ.ಬಿ.ಜಯಚಂದ್ರ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
ಜನತೆಯ ಭಾವನೆಗಳನ್ನು ಗೌರವಿಸಲು ಸರ್ಕಾರ ತೀರ್ಮಾನಿಸಿದೆ. ತಮ್ಮನ್ನು ಸೇರಿದಂತೆ ಇಬ್ಬರು ಸದಸ್ಯರ ಸಚಿವಾಲಯ ಸಮಿತಿ ಬಿಡದಿ ಹಾಗೂ ಬೊಮ್ಮಸಂದ್ರಗಳಿಗೆ ಭೇಟಿ ನೀಡಿ, ಬಯೋಟೆಕ್ ಪಾರ್ಕ್ ಸ್ಥಾಪನೆಗೆ ಪರ್ಯಾಯ ಸ್ಥಳ ಪರಿಶೀಲನೆ ನಡೆಸುವುದಾಗಿ ಜಯಚಂದ್ರ ತಿಳಿಸಿದರು.
ಕೃಷಿ ವಿವಿಯ ಉಪ ಕುಲಪತಿ ಸೇರಿದಂತೆ ವಿದ್ಯಾರ್ಥಿಗಳು, ಜಿಕೆವಿಕೆ ಸಿಬ್ಬಂದಿ ಬಯೋಟೆಕ್ ಪಾರ್ಕ್ ಸ್ಥಾಪನೆಗೆ ಕೃಷಿ ವಿವಿ ಆವರಣದಲ್ಲಿ 100 ಎಕರೆ ಜಮೀನು ನೀಡುವುದರ ವಿರುದ್ಧ ಭಾರೀ ಪ್ರತಿಭಟನೆ ನಡೆಸಿದ್ದರು. ಕಳೆದ ವಾರ ನಡೆದ ಈ ಪ್ರತಿಭಟನೆ ಹಿಂಸಾಚಾರಕ್ಕೂ ಕಾರಣವಾಗಿ, ಪ್ರಕರಣ ರಾಜಕೀಯ ಬಣ್ಣವನ್ನೂ ಪಡೆದುಕೊಂಡುದುದನ್ನು ಇಲ್ಲಿ ಸ್ಮರಿಸಬಹುದು.
ಐದು ಸ್ಥಳಗಳಲ್ಲಿ ಆಹಾರ ಸಂಸ್ಕರಣೆ ಪಾರ್ಕ್
ಬಾಗಲಕೋಟೆ, ಚಿತ್ರದುರ್ಗ, ಮಾಲೂರು, ಮದ್ದೂರು ಹಾಗೂ ಬೆಳಗಾವಿಗಳಲ್ಲಿ ಆಹಾರ ಸಂಸ್ಕರಣೆ ಪಾರ್ಕ್ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ. ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಆಹಾರ ಸಂಸ್ಕರಣೆ ನೀತಿಯನ್ನು ಅಂತಿಮಗೊಳಿಸಲಾಗುವುದು ಎಂದು ಜಯಚಂದ್ರ ಹೇಳಿದರು.
(ಪಿಟಿಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications