ನವೆಂಬರ್ ಕೊನೆಗೆ ಕುಶಾಲ ನಗರದ ಪೊನ್ನಂಪೇಟೆಯಲ್ಲಿ ಕೃಷಿ ಮೇಳ
ಕುಶಾಲನಗರ : ಇಲ್ಲಿನ ಪೊನ್ನಂಪೇಟೆಯಲ್ಲಿ ಜಿಲ್ಲಾ ಪಂಚಾಯತ್ ಕೃಷಿ ಹಾಗೂ ಕೈಗಾರಿಕಾ ನಿರ್ವಹಣಾ ಸಮಿತಿಯು ನವೆಂಬರ್ ಕೊನೇ ವಾರದಲ್ಲಿ ಕೃಷಿ ಮೇಳವನ್ನು ಆಯೋಜಿಸಿದೆ.
ಈ ವಿಷಯವನ್ನು ಸಮಿತಿಯ ಅಧ್ಯಕ್ಷ ಬಿ.ಜಿ. ರಘುನಾಥ್ ನಾಯಕ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕೃಷಿ ಅಧ್ಯಯನ ಕೇಂದ್ರದಲ್ಲಿ ಸಮ್ಮೇಳನವು ನಡೆಯಲಿದ್ದು, ಕೃಷಿ ಬೆಳೆಗಳು, ಬಿತ್ತನೆ ಬೀಜ, ಕೊಡಗಿನ ವಾಣಿಜ್ಯ ಬೆಳೆಗಳ ಬಗ್ಗೆ ಸಮ್ಮೇಳನದಲ್ಲಿ ಚರ್ಚೆ ನಡೆಸಲಾಗುವುದು. ಕೃಷಿಕರಿಗೆ ಆಧುನಿಕ ತಂತ್ರಜ್ಞಾನ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವ್ಯವಸಾಯವನ್ನು ಇನ್ನಷ್ಟು ಲಾಭದಾಯಕವಾಗಿ ನಡೆಸಲು ಸರಿಯಾದ ಮಾಹಿತಿಯ ಕೊರತೆ ಇದೆ. ಈ ಬಗ್ಗೆಯೂ ಸಮ್ಮೇಳನದಲ್ಲಿ ಮಾತುಕತೆ ನಡೆಸಲಾಗುವುದು.
ಕಡಿಮೆ ಸಮಯದಲ್ಲಿ ಹೆಚ್ಚು ಲಾಭ ತರುವ ರೇಶ್ಮೆ ವ್ಯವಸಾಯದ ಬಗ್ಗೆಯೂ ರೈತರಿಗೆ ತಿಳಿಸಿಕೊಡಬೇಕಾಗಿದೆ. ಅಲ್ಲದೆ ಕೃಷಿ ಸಚಿವಾಲಯದ ಸುಧಾರಣೆಗೆ ಸಂಬಂಧಿಸಿ ಎಲ್ಲ ಮಾಹಿತಿಗಳೂ ರೈತರನ್ನು ತಲುಪಬೇಕು. ಸಾಮಾನ್ಯವಾಗಿ ಮಣ್ಣು ರಕ್ಷಣೆಯ ಬಗ್ಗೆ ನಿರ್ಲಕ್ಷ್ಯ ತಾಳುವ ರೈತರಿಗೆ ಆ ಬಗ್ಗೆ ತಿಳಿಸಿಕೊಡುವ ಕಾರ್ಯ ಆಗಬೇಕಾಗಿದೆ ಎಂದು ನಾಯಕ್ ಹೇಳಿದರು. ಸಮ್ಮೇಳನವನ್ನು ರಾಜ್ಯ ಕೃಷಿ ಸಚಿವರು ಉದ್ಘಾಟಿಸಲಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications