ಗ್ವಾಲಿಯರ್ನಲ್ಲಿ ಬುಧವಾರ ಸಿಂಧಿಯಾ ಅಂತ್ಯಸಂಸ್ಕಾರ
ನವದೆಹಲಿ : ಮೈನ್ಪುರಿ ಬಳಿ ಭಾನುವಾರ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಮಾಜಿ ಕೇಂದ್ರ ಸಚಿವ ಮಾಧವರಾವ್ ಸಿಂಧ್ಯಾ ಅವರ ಮೃತ ದೇಹವನ್ನು ಕೇಂದ್ರ ಸರಕಾರದ ವಿಶೇಷ ವಿಮಾನದಲ್ಲಿ ಆಗ್ರಾದಿಂದ ದೆಹಲಿಗೆ ಸೋಮವಾರ ತರಲಾಗಿದೆ.
ಸಿಂಧ್ಯಾ ಅವರ ಕಳೇಬರವನ್ನು ಸಾರ್ವಜನಿಕರ ದರ್ಶನಕ್ಕಾಗಿ ದೆಹಲಿಯ ಅವರ ನಿವಾಸದಲ್ಲಿ ಇಡಲಾಗಿದೆ. ಸರಕಾರದ ಪರವಾಗಿ ಅರುಣ್ಜೈಟ್ಲಿ, ವಿಜಯ್ ಗೋಯಲ್, ಕಾಂಗ್ರೆಸ್ ನಾಯಕರಾದ ಸಲ್ಮಾನ್ ಖುರ್ಷಿದ್ ಅವರು ಅಪಘಾತ ನಡೆದ ಸ್ಥಳಕ್ಕೆ ತೆರಳಿ ಸಿಂಧ್ಯಾ ಅವರ ಮೃತದೇಹವನ್ನು ದೆಹಲಿಗೆ ತಂದರು.
ಬುಧವಾರ ಅಂತ್ಯಕ್ರಿಯೆ: ಬುಧವಾರ ಸಿಂಧ್ಯಾ ಅವರ ಅಂತ್ಯ ಸಂಸ್ಕಾರ ಗ್ವಾಲಿಯರ್ನಲ್ಲಿ ನಡೆಯಲಿದೆ. ಗ್ವಾಲಿಯರ್ ರಾಜಮನೆತನದ ವಿಧಿ ವಿಧಾನಗಳ ರೀತ್ಯ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ಹೇಳಿವೆ.
ಗೌರವಾರ್ಥ ಬಂದ್: ಮಧ್ಯಪ್ರದೇಶದ ಗ್ವಾಲಿಯರ್ ಮನೆತನದ ರಾಜಕುವರ ಹಾಗೂ ಕ್ರಿಯಾಶೀಲ ರಾಜಕಾರಣಿ ಸಿಂಧ್ಯಾ ಅವರ ನಿಧನ ಸುದ್ದಿ ತಿಳಿದ ಮಧ್ಯಪ್ರದೇಶದ ನಿವಾಸಿಗಳು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ, ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ಪ್ರತಿಕೂಲ ಹವಾಮಾನ ಹಾಗೂ ಎಂಜಿನ್ನಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ವಿಮಾನ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಈ ಅಪಘಾತದಲ್ಲಿ ಸಿಂಧಿಯಾ ಅವರ ಜತೆ ಪ್ರಯಾಣಿಸುತ್ತಿದ್ದ ಪತ್ರಕರ್ತರಾದ ಅಂಜುಶರ್ಮಾ (ಹಿಂದೂಸ್ತಾನ್ ಟೈಮ್ಸ್), ಸಂಜೀವ್ ಸಿನ್ಹಾ (ಇಂಡಿಯನ್ ಎಕ್ಸ್ಪ್ರೆಸ್), ರಾಜನ್ ಝಾ (ಆಜ್ತಕ್), ಗೋಪಾಲ್ ಬಿಸ್ಟ್ (ಛಾಯಾಗ್ರಾಹಕ) ಹಾಗೂ ಪೈಲಟ್ ರಾಯ್ ಗೌತಮ್ ಮತ್ತು ಸಹ ಪೈಲಟ್ ರಿತು ಕೂಡ ಸಾವನ್ನಪ್ಪಿದ್ದಾರೆ.
ಪಾರು: ಕಾನ್ಪುರದ ಸಾರ್ವಜನಿಕ ರ್ಯಾಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಂಧ್ಯಾ ಅವರ ಜೊತೆ ತೆರಳಬೇಕಿದ್ದ ದೆಹಲಿ ಮುಖ್ಯಮಂತ್ರಿ ಶೀಲಾದೀಕ್ಷಿತ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ ಅಯ್ಯರ್ ಅವರು, ಕೊನೆ ಕ್ಷಣದಲ್ಲಿ ತಮ್ಮ ಪ್ರಯಾಣ ರದ್ದು ಪಡಿಸಿದ ಕಾರಣ ಸಾವಿನ ದವಡೆಯಿಂದ ಪಾರಾಗಿದ್ದಾರೆ.
(ಪಿಟಿಐ/ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications