ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ,ಗಂಟೆಕಾಲ ಸಂಚಾರ ಅಸ್ತವ್ಯಸ್ತ
ಉಡುಪಿ: ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ ದರ ಹೆಚ್ಚಿಸಿರುವುದನ್ನು ವಿರೋಧಿಸಿ ಜಿಲ್ಲೆಯ ಭಾರತೀಯ ಕಿಸಾನ್ ಸಂಘದ ಸದಸ್ಯರು ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಸ್ತೆ ತಡೆ ನಡೆಸಿದರು. ಇದರಿಂದಾಗಿ ಸುಮಾರು ಒಂದು ಗಂಟೆಯ ಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು.
ಬೆಳಗ್ಗೆ 11 ರಿಂದ 12 ರ ಸುಮಾರಿಗೆ ಸುಮಾರು 2000 ಸಂಖ್ಯೆಯಲ್ಲಿದ್ದ ಭಾರತೀಯ ಕಿಸಾನ್ ಸಂಘದ ಸದಸ್ಯರು ರಸ್ತೆ ತಡೆ ಚಳವಳಿ ನಡೆಸಿದರು. ರಾಜ್ಯದಲ್ಲಿ ನೀರಾವರಿ ಪಂಪ್ಸೆಟ್ಗಳ ಮೇಲಿನ ವಿದ್ಯುತ್ ದರ ಹೇರಿಕೆಯನ್ನು ವಿರೋಧಿಸಿ ಸಂಘದ ರಾಜ್ಯ ಘಟಕ ನೀಡಿದ ಪ್ರತಿಭಟನೆ ಕರೆಯ ಅಂಗವಾಗಿ ಈ ಚಳವಳಿ ನಡೆಸಲಾಯಿತು.
(ಪಿಟಿಐ)
Comments
Story first published: Monday, October 1, 2001, 5:30 [IST]