ಅಂತರರಾಷ್ಟ್ರೀಯ ಕಾಫಿ ಕೌನ್ಸಿಲ್ ಅಧ್ಯಕ್ಷೆಯಾಗಿ ಲಕ್ಷ್ಮಿವೆಂಕಟಾಚಲಂ
ಬೆಂಗಳೂರು: ಅಂತರರಾಷ್ಟ್ರೀಯ ಕಾಫಿ ಕೌನ್ಸಿಲ್(ಐಸಿಓ) ನ 2001-2002 ಇಸವಿಯ ಅಧ್ಯಕ್ಷರಾಗಿ ಕಾಫಿ ಬೋರ್ಡ್ನ ಅಧ್ಯಕ್ಷೆ ಲಕ್ಷ್ಮಿ ವೆಂಕಟಾಚಲಂ ಆಯ್ಕೆಯಾಗಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಭಾರತೀಯರೊಬ್ಬರು ಪ್ರತಿಷ್ಠಿತ ಅಂತರರಾಷ್ಟ್ರೀಯ ಕಾಫಿ ಕೌನ್ಸಿಲ್ನ ಅಧ್ಯಕ್ಷ ಪೀಠ ಗೌರವಕ್ಕೆ ಪಾತ್ರರಾಗಿದ್ದಾರೆ.
ಇತ್ತೀಚೆಗೆ ಲಂಡನ್ನಲ್ಲಿ ನಡೆದ ಸಭೆಯಲ್ಲಿ , ಲಕ್ಷ್ಮಿ ವೆಂಕಟಾಚಲಂ ಐಸಿಓ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಅಂತರರಾಷ್ಟ್ರೀಯ ಕಾಫಿ ಕೌನ್ಸಿಲ್ ಅಧ್ಯಕ್ಷ ಪದ ಅಲಂಕರಿಸುತ್ತಿರುವ ಎರಡನೇ ಮಹಿಳೆ ಎನಿಸಿಕೊಂಡಿದ್ದಾರೆ. ಈ ಮುನ್ನ 1982-1983 ರಲ್ಲಿ ಬ್ರಿಟನ್ನ ಅಟ್ರಿಡ್ಜ್ ಅವರು ಅಂತರರಾಷ್ಟ್ರೀಯ ಕಾಫಿ ಕೌನ್ಸಿಲ್ನ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು ಎಂದು ರಾಜ್ಯ ಕಾಫಿ ಬೋರ್ಡ್ ಪ್ರಕಟಣೆ ಸೋಮವಾರ ತಿಳಿಸಿದೆ.
ತಮ್ಮ ಮೇಲೆ ನಂಬುಗೆಯಿಟ್ಟು ಮಹತ್ವದ ಜವಾಬ್ದಾರಿ ವಹಿಸಿರುವ ಐಸಿಓ ಸದಸ್ಯರಿಗೆ ಲಕ್ಷ್ಮಿ ವೆಂಕಟಾಚಲಂ ಅವರು ಧನ್ಯವಾದ ಸಲ್ಲಿಸಿದ್ದಾರೆ. ತಮ್ಮ ಕರ್ತವ್ಯವನ್ನು ನಿರ್ವಹಿಸುವಲ್ಲಿ ಎಲ್ಲರ ಸಹಕಾರವನ್ನು ಅಪೇಕ್ಷಿಸುವುದಾಗಿ ಅವರು ತಿಳಿಸಿದ್ದಾರೆ ಎಂದೂ ಪ್ರಕಟಣೆ ಹೇಳಿದೆ.
ಉತ್ತಮ ಗುಣಮಟ್ಟದ ಕಾಫಿ- ಅಧ್ಯಯನಕ್ಕೆ ಸಮಿತಿ ರಚನೆ
ಐಸಿಓ ಸಭೆ ಕಾಫಿಯ ಗುಣಮಟ್ಟವನ್ನು ಉತ್ತಮ ಪಡಿಸುವ ಕುರಿತು ಚರ್ಚಿಸಿದ್ದು , ಗುಣಮಟ್ಟವನ್ನು ಅಭಿವೃದ್ಧಿ ಪಡಿಸಲು ಸಮಿತಿಯಾಂದನ್ನು ನೇಮಿಸಲು ತೀರ್ಮಾನಿಸಿತು. ಕಾಫಿ ಉತ್ಪಾದಕ ಹಾಗೂ ಗ್ರಾಹಕ ರಾಷ್ಟ್ರಗಳ ಸದಸ್ಯರನ್ನು ಹೊಂದಿರುವ ಈ ಸಮಿತಿ ರಫ್ತು ಗುಣಮಟ್ಟದ ಕಾಫಿಯ ನೀತಿಗಳನ್ನು ಗುಣಮಟ್ಟ ಮಾನದಂಡಗಳಾಗಿ ಅನುಷ್ಠಾನಗೊಳಿಸುವ ಕುರಿತು ತನ್ನ ವರದಿ ಸಲ್ಲಿಸಲಿದೆ. ಬರುವ ಜನವರಿಯಲ್ಲಿ ಈ ವರದಿಯ ನಿರೀಕ್ಷೆಯಲ್ಲಿದ್ದು , ಆನಂತರದಲ್ಲಿ ವರದಿಯ ಕುರಿತು ಚರ್ಚೆ ನಡೆಸಲು ಓಸಿಓ ತೀರ್ಮಾನಿಸಿತು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications