ಸಿಮಿ ನಿಷೇಧ ಏಕೆ ;ಆರೆಸ್ಸಸ್,ಭಜರಂಗದಳ, ವಿಹೆಚ್ಪಿ ಮಾಡುತ್ತಿರುವುದೇನು?
ಧಾರವಾಡ : ಭಾರತೀಯ ಮುಸ್ಲಿ ಂ ವಿದ್ಯಾರ್ಥಿಗಳ ಸಂಘಟನೆ (ಸಿಮಿ) ಯನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕಟುವಾಗಿ ಟೀಕಿಸಿರುವ ಭಾರತೀಯ ಮುಸ್ಲಿಂ ಲೀಗ್ನ ಕರ್ನಾಟಕ ಶಾಖೆ, ಸಿಮಿಯಂಥದ್ದೇ ಚಟುವಟಿಕೆಗಳಲ್ಲಿ ತೊಡಗಿರುವ ಆರೆಸ್ಸಸ್, ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆಗಳನ್ನು ನಿಷೇಧಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆ.
ಮುಸ್ಲಿಂಲೀಗ್ನ ರಾಜ್ಯ ಘಟಕದ ಅಧ್ಯಕ್ಷ ಎಂ.ಎಸ್.ಇನಾಂದಾರ್ ಅವರು ಸೋಮವಾರ ಬಿಡುಗಡೆ ಮಾಡಿರುವ ಸುದ್ದಿ ಪ್ರಕಟಣೆಯಲ್ಲಿ ಸಿಮಿಯನ್ನು ನಿಷೇಧಿಸಿರುವ ಕ್ರಮವನ್ನು ವಿರೋಧಿಸಿದ್ದಾರೆ. ಸಿಮಿ ನಿಷೇಧಕ್ಕೆ ಸರ್ಕಾರ ಸಾಕ್ಷಿ ಹೊಂದಿದ್ದರೆ, ಬಹಿರಂಗವಾಗಿ ಅಲ್ಪ ಸಂಖ್ಯಾತರ ವಿರುದ್ಧ ಚಟುವಟಿಕೆಗಳನ್ನು ನಡೆಸುತ್ತಿರುವ ಆರೆಸ್ಸಸ್, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಮುಂತಾದ ಫ್ಯಾಸಿಸ್ಟ್ ಸಂಸ್ಥೆಗಳ ವಿರುದ್ಧ ಸರ್ಕಾರ ಏನು ಕ್ರಮ ಕೈಗೊಳ್ಳುತ್ತದೆ ಎಂದು ಇನಾಂದಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಮಿ ವಿರುದ್ಧ ಸರ್ಕಾರ ಸಾಕ್ಷ್ಯಾಧಾರಗಳನ್ನು ಹೊಂದಿದ್ದರೆ ಅವುಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಹೇಳಿರುವ ಇನಾಂದಾರ್, ಆರೆಸ್ಸಸ್ ಮುಂತಾದ ಫ್ಯಾಸಿಸ್ಟ್ ಸಂಘಟನೆಗಳನ್ನು ತಕ್ಷಣವೇ ನಿಷೇಧಿಸುವ ಮೂಲಕ ರಾಷ್ಟ್ರೀಯ ಭಾವೈಕ್ಯತೆಯನ್ನು ಸರ್ಕಾರ ರಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications