ಮನಸೋಇಚ್ಛೆ ಕೇಬಲ್ ಶುಲ್ಕ ವಸೂಲಿ ಪ್ರಶ್ನಿಸಿ ರಿಟ್ ಅರ್ಜಿ
ಬೆಂಗಳೂರು : ಸ್ಟಾರ್ ಟಿ.ವಿ. ಮತ್ತು ಕೇಬಲ್ ಆಪರೇಟರ್ಗಳ ನಡುವೆ ಸಮರವೇ ನಡೆಯುತ್ತಿದೆ. ಬೆಂಗಳೂರಿನ ಕೆಲವು ಬಡಾವಣೆಗಳಲ್ಲಿ ಕೇಬಲ್ ಆಪರೇಟರ್ಗಳು ಸ್ಟಾರ್ ಟಿ.ವಿ. ಜಾಲದ ಪ್ರಸಾರವನ್ನೇ ಸ್ಥಗಿತಗೊಳಿಸಿದ್ದಾರೆ. ಸ್ಟಾರ್ ಟಿ.ವಿ. ಬಳಗ ಪ್ರಸಾರ ಶುಲ್ಕ ಹೆಚ್ಚಿಸಿರುವ ಕಾರಣ ಗ್ರಾಹಕರೂ ಇನ್ನು ಮುಂದೆ ಹೆಚ್ಚು ಶುಲ್ಕ ನೀಡಬೇಕು ಎಂದು ಆಪರೇಟರ್ಗಳು ಪಟ್ಟು ಹಿಡಿದಿದ್ದಾರೆ.
ಈ ಮಧ್ಯೆ ಮನಸೋ ಇಚ್ಛೆ ಹಣ ವಸೂಲಿ ಮಾಡುತ್ತಿರುವ ಕೇಬಲ್ ಆಪರೇಟರ್ಗಳ ಕ್ರಮವನ್ನು ಪ್ರಶ್ನಿಸಿ ಗ್ರಾಹಕರೊಬ್ಬರು ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ. ವಕೀಲರಾದ ಎ.ವಿ. ಅಮರನಾಥ್ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿರುವ ಮುಖ್ಯ ನ್ಯಾಯಮೂರ್ತಿಗಳಾದ ಎನ್.ಕೆ. ಜೈನ್ ಹಾಗೂ ನ್ಯಾಯಮೂರ್ತಿ ಎನ್. ಕುಮಾರ್ ಅವರನ್ನು ಒಳಗೊಂಡ ವಿಭಾಗೀಯ ಪೀಠವು (ಜಿ.ಪಿ.ಓ) ಹೆಡ್ ಪೋಸ್ಟ್ಮಾಸ್ಟರ್, ಕೇಬಲ್ ಆಪರೇಟರ್ಗಳ ಸಂಘ ಹಾಗೂ ಸ್ಟಾರ್ ಟಿ.ವಿ.ಗೆ ನೋಟಿಸ್ ಜಾರಿಗೆ ಆದೇಶಿಸಿದೆ.
ಯಾವುದೇ ನಿಯಮಾವಳಿ ಇಲ್ಲದೆ ಕೇಬಲ್ ಆಪರೇಟರ್ಗಳು ಒಂದೊಂದು ಬಡಾವಣೆಯಲ್ಲಿ ಒಂದೊಂದು ರೀತಿ ಹಣ ವಸೂಲಿ ಮಾಡುತ್ತಿದ್ದಾರೆ. ಕೇಬಲ್ ಆಪರೇಟರ್ಗಳಿಗೆ ಅನುಮತಿ ನೀಡುವ ಸಂದರ್ಭದಲ್ಲಿ ಇಷ್ಟೇ ಶುಲ್ಕ ನಿಗದಿ ಪಡಿಸಬೇಕು ಎಂದು ನಿಗದಿ ಪಡಿಸಿಲ್ಲ. ಹೀಗಾಗಿ ಗ್ರಾಹಕರು ಕಿರುಕುಳ ಅನುಭವಿಸುತ್ತಿದ್ದಾರೆ ಎಂದು ಅರ್ಜಿದಾರರು ತಿಳಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸುವಂತೆಯೂ ಅವರು ಪ್ರಾರ್ಥಿಸಿದ್ದಾರೆ.
ಸ್ಟಾರ್ ಟಿ.ವಿ. ಮತ್ತು ಕೇಬಲ್ ಆಪರೇಟರ್ಗಳ ಸಮರದಿಂದಾಗಿ ಗ್ರಾಹಕರು ಸ್ಟಾರ್ ಕಾರ್ಯಕ್ರಮ ವೀಕ್ಷಣೆಯಿಂದ ವಂಚಿತರಾಗಿದ್ದಾರೆ ಎಂದು ತಿಳಿಸಿರುವ ಅವರು, ಹೆಚ್ಚು ಹಣ ವಸೂಲಿ ಮಾಡುವುದು ಕಾನೂನು ಬಾಹಿರ. ಮನಸೋಇಚ್ಛೆ ಶುಲ್ಕ ವಸೂಲಿ ಮಾಡುವುದನ್ನು ನಿಯಂತ್ರಿಸಿ, ಕ್ರಮಬದ್ಧಗೊಳಿಸುವಂತೆ ಅವರು, ನ್ಯಾಯಾಲಯವನ್ನು ಕೋರಿದ್ದಾರೆ.
(ಪಿ.ಟಿ.ಐ/ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications