ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉಪಗ್ರಹ ಮೂಲಕ ಶಿಕ್ಷಣ-ಪರಮೇಶ್ವರ್
ಬೆಂಗಳೂರು : ಬರುವ ನವಂಬರ್ನಿಂದ ರಾಜ್ಯದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉಪಗ್ರಹ ಮೂಲಕ ಶಿಕ್ಷಣವನ್ನು ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಜಿ.ಪರಮೇಶ್ವರ್ ತಿಳಿಸಿರುವುದಾಗಿ explocity.com ವರದಿ ಮಾಡಿದೆ.
ದೇಶದಲ್ಲಿ ಪ್ರತಿಶತ 40 ಇಂಜಿನಿಯರ್ಗಳು ರಾಜ್ಯದಲ್ಲಿ ರೂಪುಗೊಳ್ಳುತ್ತಿದ್ದರೂ, ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನಗಳು ತುಂಬಾ ಕಡಿಮೆಯಾಗಿವೆ. ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ತೀವ್ರ ಪ್ರಯತ್ನಗಳನ್ನು ಕೈಗೊಂಡಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ಉನ್ನತ ಶಿಕ್ಷಣ ವಿಚಾರದಲ್ಲಿ ರಾಜ್ಯ ಸರ್ಕಾರ ಮುಕ್ತ ಮನಸ್ಸಿನಿಂದಿದೆ. ಆ ಕಾರಣದಿಂದಲೇ, ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ರಾಜ್ಯದ ಹೊರಗಿನ ವಿದ್ಯಾರ್ಥಿಗಳಿಗೆ ಪ್ರತಿಶತ 15 ಸೀಟುಗಳನ್ನು ಮೀಸಲಿಡಲಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
(ಇನ್ಫೋ ವಾರ್ತೆ)
Comments
Story first published: Wednesday, October 3, 2001, 5:30 [IST]