ಅಕ್ಟೋಬರ್ 10ರಂದು ಕಾರಂತ ಜನ್ಮ ಶತಾಬ್ದಿ ವರ್ಷಾಚರಣೆ ಉದ್ಘಾಟನೆ
ಪುತ್ತೂರು: ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ದಿವಂಗತ ಡಾ. ಕೆ. ಶಿವರಾಮ ಕಾರಂತ ಅವರು ಜನಿಸಿ ಅಕ್ಟೋಬರ್ 10ಕ್ಕೆ ತೊಂಬತ್ತೊಂಬತ್ತು ವರ್ಷಗಳು ತುಂಬಲಿದ್ದು, ಈ ವರ್ಷವನ್ನು ಕಾರಂತ ಜನ್ಮಶತಾಬ್ದ ವರ್ಷವಾಗಿ ಆಚರಿಸಲು ಪುತ್ತೂರಿನ ವಿವೇಕಾನಂದ ಕಾಲೇಜು ಶಿವರಾಮ ಕಾರಂತ ಅಧ್ಯಯನ ಕೇಂದ್ರನಿರ್ಧರಿಸಿದೆ.
ಜನ್ಮ ಶತಾಬ್ದಿ ಸಮಾರಂಭವನ್ನು ಅಕ್ಟೋಬರ್ 10ರಂದು ವಿವೇಕಾನಂದ ಕಾಲೇಜು ಸಭಾಂಗಣದಲ್ಲಿ ಕವಿ ಡಾ। ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ ಉದ್ಘಾಟಿಸುವರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ। ಗುರುಲಿಂಗ ಕಾಪಸೆ ಅಧ್ಯಕ್ಷತೆ ವಹಿಸುವರು.
ಈ ಸಂದರ್ಭದಲ್ಲಿ ಕೇಂದ್ರದ ಪ್ರಕಟಣೆಗಳಾದ ಕುರಾಡಿ ಸೀತಾರಾಮ ಅಡಿಗರು ಬರೆದ ಕಾರಂತರ ಜೀವನ ಚರಿತ್ರೆ ‘ಬದ್ಧತೆಯ ಬದುಕು’ ಮತ್ತು ಬೋಳಂತಕೋಡಿ ಈಶ್ವರ ಭಟ್ ಸಂಪಾದಿಸಿದ ಕಾರಂತ ಕುರಿತ ಕವನ ಸಂಕಲನ ‘ಕಾವ್ಯಕಾರಂತ’ ಪುಸ್ತಕಗಳನ್ನು ಸಾಹಿತಿ ಡಾ। ಜಯಪ್ರಕಾಶ ಮಾವಿನಕುಳಿ ಅನಾವರಣಗೊಳಿಸಲಿದ್ದಾರೆ. ವನ್ಯಜೀವಿ ಛಾಯಾಗ್ರಾಹಕ ಮಂಜುನಾಥ ಹೆಗಡೆ ಹೊಸಬಾಳೆ ಅವರು ಸಂಪಾದಿಸಿರುವ ವನ್ಯಜೀವಿಗಳ ಭಾವಚಿತ್ರಗಳನ್ನೊಳಗೊಂಡ ‘‘ಶುಭಾಶಯಪತ್ರ’’ಗಳನ್ನು ಮಂಗಳೂರು ಎಲೋಸಿಯಸ್ ಕಾಲೇಜು ಪ್ರಾಂಶುಪಾಲ ರೆ।ಫಾ।ಡಾ। ಪ್ರಶಾಂತ್ ಮಾಡ್ತಾ ಬಿಡುಗಡೆಗೊಳಿಸುವರು.
ಕಾರಂತ ಭಾವಪ್ರಪಂಚ
ಅದೇ ದಿನದಂದು ಪುತ್ತೂರು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಛಾಯಾಗ್ರಾಹಕ ಯಜ್ಞ ಮಂಗಳೂರು ಕ್ಲಿಕ್ಕಿಸಿರುವ ಡಾ। ಕಾರಂತರ ಅಪೂರ್ವ ಭಾವಚಿತ್ರಗಳ ಪ್ರದರ್ಶನವನ್ನು ಮಂಜುನಾಥ ಹೆಗಡೆ ಹೊಸಬಾಳೆ ಉದ್ಘಾಟಿಸಲಿದ್ದಾರೆ. ಅಕ್ಟೋಬರ್ 10, 11 ಮತ್ತು 12ರಂದು ಈ ಪ್ರದರ್ಶನ ಸಾರ್ವಜನಿಕರಿಗಾಗಿ ತೆರೆದಿರುತ್ತದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications