ಭಯೋತ್ಪಾದನೆ ವಿರುದ್ಧ ಹೋರಾಟ ಭಾರತ ನಿಲುವಿಗೆ ಬ್ಲೇರ್ ಬೆಂಬಲ
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಗಡಿಯಾಚೆಯ ಭಯೋತ್ಪಾದನೆ ಹಾಗೂ ಶ್ರೀನಗರದಲ್ಲಿ ಅಕ್ಟೋಬರ್ 1ರಂದು ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ನ್ಯಾಯ ಸಿಗಲೇ ಬೇಕು ಎಂದು ಬ್ರಿಟನ್ಪ್ರಧಾನಿ ಟೋನಿ ಬ್ಲೇರ್ ಹೇಳಿದ್ದಾರೆ.
ಭಯೋತ್ಪಾದನೆ ವಿರುದ್ಧ ಜಾಗತಿಕ ಮೈತ್ರಿಕೂಟ ರಚನೆ ಸಂಬಂಧ ಭಾರತಕ್ಕೆ ಆಗಮಿಸಿರುವ ಅವರು, ಪ್ರಧಾನಿ ಅಟಲ್ಬಿಹಾರಿ ವಾಜಪೇಯಿ ಅವರೊಂದಿಗೆ 35 ನಿಮಿಷಗಳ ಕಾಲ ಸಮಾಲೋಚಿಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಭಯೋತ್ಪಾದನೆಯನ್ನು ಹತ್ತಿಕ್ಕಲು ಅಂತಾರಾಷ್ಟ್ರೀಯ ಸಮುದಾಯ ಒಂದಾಗಬೇಕು ಎಂದೂ ಅವರು ಪ್ರತಿಪಾದಿಸಿದರು. ವಿಶ್ವವೇ ಸಂಘಟಿತವಾಗಿ ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸಬೇಕು ಎಂಬ ಭಾರತದ ನಿಲುವನ್ನು ಅವರು ಸಂಪೂರ್ಣವಾಗಿ ಬೆಂಬಲಿಸಿದರು.
ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮಡಿದವರಿಗೆ ಬ್ಲೇರ್ ಸಂತಾಪ ಸೂಚಿಸಿದರು. ಇಂತಹ ದುಷ್ಕೃತ್ಯಗಳಿಗೆ ಯಾವುದೇ ನಾಗರಿಕ ಸಮಾಜದಲ್ಲಿ ಸ್ಥಾನ ಇಲ್ಲ ಎಂದು ಬ್ಲೇರ್ ಕಟುವಾಗಿ ನುಡಿದರು.
ಇದಕ್ಕೂ ಮುನ್ನ ಈ ಇಬ್ಬರು ನಾಯಕರು ಭಯೋತ್ಪಾದನೆ ಹತ್ತಿಕ್ಕಲು ಜಾಗತಿಕ ಮೈತ್ರಿಕೂಟ ರಚಿಸುವ ಸಂಬಂಧ ಮಾತುಕತೆ ನಡೆಸಿದರು. ಭಾರತದ ನೆಲದಲ್ಲಿ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿರುವ ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಘೋಷಿಸಬೇಕು ಎಂಬ ಭಾರತದ ಒತ್ತಾಯವನ್ನು ಬ್ಲೇರ್ ತಿರಸ್ಕರಿಸಿದರು.
ಈ ವಿಷಯವನ್ನು ಚರ್ಚಿಸಲು ಇದು ಸಕಾಲವಲ್ಲ ಎಂದು ಅವರು ವಾಜಪೇಯಿ ಅವರಿಗೆ ಸ್ಪಷ್ಟಪಡಿಸಿದರು. ಸೆಪ್ಟೆಂಬರ್ 11ರಂದು ಅಮೆರಿಕದ ಮೇಲೆ ನಡೆದ ಉಗ್ರರ ದಾಯುದಾಳಿ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯವಾಗಿ ಬೆಳೆಯುತ್ತಿರುವ ಭಯೋತ್ಪಾದನೆಯನ್ನು ಎಲ್ಲ ರಾಷ್ಟ್ರಗಳೂ ಒಂದಾಗಿ ಹತ್ತಿಕ್ಕುವ ಅವಶ್ಯಕತೆ ಇದೆ ಎಂಬ ಭಾರತದ ನಿಲುವನ್ನು ಅವರು ಅನುಮೋದಿಸಿದರು.
ಜಾಗತಿಕ ಭಯೋತ್ಪಾದನೆಯ ವಿರುದ್ಧ ಪ್ರತ್ಯೇಕ ಹೋರಾಟ ನಡೆಸುವುದನ್ನು ತಾವು ಬೆಂಬಲಿಸುವುದಿಲ್ಲ ಎಂದು ಪ್ರಧಾನಿ ವಾಜಪೇಯಿ ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
(ಪಿ.ಟಿ.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications