ರಕ್ಷಣಾ ಕಾರ್ಯ ಮುಕ್ತಾಯ ; 250 ಭಾರತೀಯರು ಇನ್ನೂ ನಾಪತ್ತೆ
ನ್ಯೂಯಾರ್ಕ್: 250 ಮಂದಿ ಭಾರತೀಯರು ಸೇರಿ 4979 ಮಂದಿ ಇನ್ನೂ ನಾಪತ್ತೆಯಾಗಿರುವಾಗಲೇ, ಸೆಪ್ಟಂಬರ್ 11 ರಂದು ಭಯೋತ್ಪಾದಕರ ದಾಳಿಗೆ ತುತ್ತಾದ ವಿಶ್ವ ವ್ಯಾಪಾರ ಕೇಂದ್ರದ ಅವಳಿ ಕಟ್ಟಡಗಳ ರಕ್ಷಣಾ ಕಾರ್ಯಗಳನ್ನು ಕೊನೆಗೊಳಿಸಿರುವುದಾಗಿ ಫೆಡರಲ್ ಪ್ರಾಧಿಕಾರಗಳು ಘೋಷಿಸಿವೆ.
ಈವರೆಗೂ 393 ದೇಹಗಳನ್ನು ಅವಶೇಷಗಳಡಿಯಿಂದ ತೆಗೆಯಲಾಗಿದ್ದು , ಅವುಗಳಲ್ಲಿ 335 ದೇಹಗಳನ್ನು ಗುರುತು ಹಿಡಿಯಲಾಗಿದೆ. ಅವಶೇಷಗಳಡಿ ಯಾರೂ ಜೀವಂತವಾಗುಳಿದಿರುವ ಸಾಧ್ಯತೆಗಳಿಲ್ಲ ಎಂದು ಅಧಿಕಾರಿಗಳು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೆ, ನಾಪತ್ತೆಯಾಗಿರುವವರ ಸಂಬಂಧಿಕರು ಮಾತ್ರ ಅಧಿಕಾರಿಗಳನ್ನು ಪೀಡಿಸುತ್ತಲೇ ಇದ್ದಾರೆ. ಪ್ರಸ್ತುತ ಪರ್ವತದೋಪಾದಿ ರಾಶಿ ಬಿದ್ದಿರುವ ಮಿಲಿಯನ್ ಟನ್ಗಟ್ಟಲೆ ಅವಶೇಷಗಳನ್ನು ಸ್ಥಳಾಂತರಿಸುವ ಕೆಲಸದಲ್ಲಿ ಸ್ಥಳೀಯ ಪ್ರಾಧಿಕಾರಗಳು ತೊಡಗಿಕೊಂಡಿವೆ. ಅವಶೇಷಗಳನ್ನು ಸಾಗಿಸುವ ಕಾರ್ಯ ಒಂದು ವರ್ಷ ಹಿಡಿಯಬಹುದೆಂದು ಅಂದಾಜು ಮಾಡಲಾಗಿದೆ.
ಪರಿಹಾರ ಕಾಮಗಾರಿ ಮುಕ್ತಾಯವಾಗಿರುವುದಾಗಿ ಫೆಡರಲ್ ಪ್ರಾಧಿಕಾರಗಳು ಪ್ರಕಟಿಸಿದ್ದರೂ, ಅಗ್ನಿಶಾಮಕ ದಳ ಹಾಗೂ ಪೊಲೀಸರ ನೆರವಿನಿಂದ ರಕ್ಷಣಾ ಕಾರ್ಯಗಳು ಮುಂದುವರಿಯುವುದಾಗಿ ನ್ಯೂಯಾರ್ಕ್ ಮೇಯರ್ ರುಡಿ ಗಿಯುಲಿಯಾನಿ ತಿಳಿಸಿದ್ದಾರೆ.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications