‘ಬಿಎಸ್ಎಫ್ ಹಿಂತೆಗೆತದಿಂದ ವೀರಪ್ಪನ್ ಶಿಕಾರಿಗೆ ಹಿನ್ನಡೆ ಇಲ್ಲ’
ಬೆಂಗಳೂರು: ಗಡಿ ಭದ್ರತಾ ಪಡೆಯನ್ನು ವಾಪಸ್ ಕರೆಸಿಕೊಳ್ಳುವ ಕೇಂದ್ರದ ಕ್ರಮದಿಂದ ತಮಿಳುನಾಡು ಮತ್ತು ಕರ್ನಾಟಕ ಜಂಟಿಯಾಗಿ ನಡೆಸುತ್ತಿರುವ ವೀರಪ್ಪನ್ ವಿರುದ್ಧದ ಕಾರ್ಯಾಚರಣೆಗೆ ಹಿನ್ನಡೆಯುಂಟಾಗಿಲ್ಲ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ತಿಳಿಸಿದ್ದಾರೆ.
ಕಾಡುಗಳ್ಳ ಹಾಗೂ ನರಹಂತಕ ವೀರಪ್ಪನ್ನನ್ನು ಬಂಧಿಸಲು ರಾಜ್ಯ ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಪಿ.ಟಿ.ಐ. ಸುದ್ದಿಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಕೃಷ್ಣ ಹೇಳಿದ್ದಾರೆ.
ಸೆ.11ರ ಅಮೆರಿಕ ಮೇಲಿನ ದಾಳಿಯಿಂದ, ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಬದಲಾವಣೆಗಳ ಹಿನ್ನೆಲೆಯಲ್ಲಿ ಬಿ.ಎಸ್.ಎಫ್. ಕರೆಸಿಕೊಳ್ಳಲಾಗಿದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದೂ ಕೃಷ್ಣ ಸ್ಪಷ್ಟೀಕರಣ ನೀಡಿದ್ದಾರೆ.
ಸದ್ಯದ ಪರಿಸ್ಥಿತಿಯಲ್ಲಿ ಬಿಎಸ್ಎಫ್ ಅನ್ನು ಕರೆಸಿಕೊಳ್ಳಲಾಗಿದ್ದು, ಮುಂದೆ ಕೇಂದ್ರ ಸರಕಾರ ಕಾರ್ಯಾಚರಣೆಗೆ ಬಿಎಸ್ಎಫ್ ನೆರವು ಒದಗಿಸುತ್ತದೆ ಎಂಬ ಭರವಸೆಯನ್ನೂ ವ್ಯಕ್ತಪಡಿಸಿದ್ದಾರೆ. ರಾಜ್ ಬಿಡುಗಡೆ ಬಳಿಕ ಕಾರ್ಯಾಚರಣೆ ತೀವ್ರಗೊಂಡಿದೆ ಎಂದೂ ಕೃಷ್ಣ ಹೇಳಿದ್ದಾರೆ.
(ಪಿ.ಟಿ.ಐ)
ವಾರ್ತಾಸಂಚಯ
ಮುಖಪುಟ
/
ವೀರಪ್ಪನ್
ಶಿಕಾರಿ