ನೀರಾ ಮಾರಾಟಗಾರರ ಬಂಧನ:ಚನ್ನಪಟ್ಟಣದಲ್ಲಿ ಬಸ್ಗೆ ಬೆಂಕಿ
ಚನ್ನಪಟ್ಟಣ: ನೀರಾ ಮಾರಾಟ ಮಾಡುತ್ತಿದ್ದ ರೈತರನ್ನು ಪೊಲೀಸರು ಬಂಧಿಸಿರುವುದನ್ನು ವಿರೋಧಿಸಿ ನಡೆದ ರಸ್ತೆ ತಡೆ ಚಳವಳಿ ಹಿಂಸಾ ಮಾರ್ಗ ಹಿಡಿದ ಪರಿಣಾಮವಾಗಿ ಏಳೆಂಟು ವಾಹನಗಳು ಜಖಂಗೊಂಡು, ಒಂದು ಸರಕಾರಿ ಬಸ್ ಬೆಂಕಿಗಾಹುತಿಯಾದ ಘಟನೆ ಸೋಮವಾರ ಮಧ್ಯಾಹ್ನ ಚನ್ನಪಟ್ಟಣದಲ್ಲಿ ನಡೆದಿದೆ.
ಶಾಂತಿಯುತವಾಗೇ ನಡೆಯುತ್ತಿದ್ದ ಚಳವಳಿಯ ಮಧ್ಯೆ ದುಷ್ಕರ್ಮಿಯಾಬ್ಬರು ಟಾಟಾಸುಮೋ ಒಂದಕ್ಕೆ ಕಲ್ಲು ತೂರಿದಾಗ, ಇತರರೂ ಅದೇ ಮಾರ್ಗ ಹಿಡಿದರು. ಇದನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದು, ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವಂತೆ ಮಾಡಿತು.
ಲಾಠಿ ಏಟಿಗೆ ಹೆದರಿ ಚದುರಿದ ಪ್ರತಿಭಟನಾಕಾರರು ಬೆಂಗಳೂರು - ಮೈಸೂರು ರಸ್ತೆಯಲ್ಲಿ ಬಸ್ಗಳಿಗೆ ಕಲ್ಲು ತೂರಿ, ಸುಮಾರು ಏಳೆಂಟು ಸರಕಾರಿ ಬಸ್ಗಳನ್ನು ಜಖಂಗೊಳಿಸಿದರು. ಚಿಕ್ಕಮಳೂರು ಕ್ರಾಸ್ ಬಳಿ ದುಷ್ಕರ್ಮಿಗಳು ಕೆಎಸ್ಆರ್ಟಿಸಿ ಬಸ್ ಒಂದಕ್ಕೆ ಬೆಂಕಿಯನ್ನೂ ಹಚ್ಚಿದರು.
ಪಟ್ಟಣದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋದ ಕೂಡಲೇ ಭಯಭೀತರಾದ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದರು. ಈ ಹೊತ್ತು ಪಟ್ಟಣದಲ್ಲಿ ಬಿಗುವಿನ ಪರಿಸ್ಥಿತಿ ಇದ್ದು, ಪೊಲೀಸರು ಮುಂಜಾಗರೂಕತೆ ಕ್ರಮವಾಗಿ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.
ಪರಿಸ್ಥಿತಿಯ ನಿಯಂತ್ರಣಕ್ಕಾಗಿ ಪೊಲೀಸರು ಕ್ರಮ ಕೈಗೊಂಡಿದ್ದು, ಹೆಚ್ಚುವರಿ ಪಡೆಯನ್ನೂ ಕರೆಸಿಕೊಳ್ಳಲಾಗಿದೆ. ಕಲ್ಲು ತೂರಾಟದಲ್ಲಿ ಕೆಲವು ಪೊಲೀಸರು ಹಾಗೂ ನಾಗರಿಕರು ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ರಮ ನೀರಾ ಮಾರಾಟಕ್ಕೆ ಬೆಂಬಲ ನೀಡುತ್ತಿದ್ದ ಮೂವರು ಹಾಗೂ ತೆಂಗಿನ ಮರಗಳಿಗೆ ನೀರಾ ಕಟ್ಟುತ್ತಿದ್ದ 21 ಜನರನ್ನು ಸೋಮವಾರ ಬಂಧಿಸಲಾಗಿದೆ. ನೀರಾ ಮಾರಾಟ ಮಾಡುತ್ತಿದ್ದ 20 ಮಂದಿಯನ್ನು ಭಾನುವಾರ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications