‘ಯುದ್ಧ : ರಾಜ್ಯ ಸಾಫ್ಟ್ವೇರ್ ಉದ್ಯಮದ ಮೇಲೆಪರಿಣಾಮ ಇಲ್ಲ’
ಬೆಂಗಳೂರು : ಅಮೆರಿಕ ನೇತೃತ್ವದಲ್ಲಿ ಆಫ್ಘಾನಿಸ್ತಾನದ ಮೇಲೆ ನಡೆಯುತ್ತಿರುವ ಭಯೋತ್ಪಾದನೆ ವಿರುದ್ಧದ ಸಮರದಿಂದ ಕರ್ನಾಟಕದ ಸಾಫ್ಟ್ವೇರ್ ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅಭಿಪ್ರಾಯಪಟ್ಟಿದ್ದಾರೆ.
ತಮಗೂ ಮೊದಲು ಈ ಕಳವಳ ಇತ್ತು, ಆದರೆ, ಕರ್ನಾಟಕದಲ್ಲಿ ಬಹಳಷ್ಟು ನುರಿತ ಸಾಫ್ಟ್ವೇರ್ ತಜ್ಞರಿದ್ದು, ಕಾರ್ಮಿಕ ವೆಚ್ಚವೂ ಇಲ್ಲಿ ಕಡಿಮೆ ಇದೆ. ಹೀಗಾಗಿ ನಾವು ಅಗತ್ಯ ಪ್ರಮಾಣದಲ್ಲಿ ಸಾಫ್ಟ್ವೇರ್ ರಫ್ತು ಮಾಡಬಹುದಾಗಿದೆ ಎಂದು ಅವರು ಸಂಜೆ ಪತ್ರಿಕೆಯಾಂದಕ್ಕೆ ನೀಡಿರುವ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಸಂದರ್ಶನದಲ್ಲಿ ಮುಖ್ಯಮಂತ್ರಿ ಕೃಷ್ಣ ಹೇಳಿದ್ದು:
- ಒಂದರಿಂದ ನಾಲ್ಕನೇ ತರಗತಿವರೆಗೆ ಕಡ್ಡಾಯವಾಗಿ ಕನ್ನಡ ಮಾಧ್ಯಮ ಶಿಕ್ಷಣ ಜಾರಿ ಮಾಡುವ ಬಗ್ಗೆ ಹೈಕೋರ್ಟ್ನಲ್ಲಿರುವ ಪ್ರಕರಣದಲ್ಲಿ ಆದಷ್ಟು ಬೇಗ ವಾದ ಮಂಡಿಸುವಂತೆ ಅಡ್ವೊಕೇಟ್ ಜನರಲ್ ಅವರಿಗೆ ಸೂಚಿಸಲಾಗುವುದು.
- ಹುಬ್ಬಳ್ಳಿಯಲ್ಲಿ ನೈಋತ್ಯ ವಲಯ ರೈಲ್ವೆ ಕಚೇರಿ ಪ್ರಾರಂಭಿಸುವುದು ಸೂಕ್ತ.
- ಕೃಷಿ ವಿ.ವಿ.ಯ ಜಿ.ಕೆ.ವಿಕೆಯಲ್ಲಿ ಜೈವಿಕ ತಂತ್ರಜ್ಞಾನ ಪಾರ್ಕ್ ಆರಂಭಿಸುವ ನಿರ್ಧಾರ ಕೈಗೊಂಡಿದ್ದು, ನಾನೆ.
- ಆನ್ಲೈನ್ ಲಾಟರಿ ಜಾರಿಗೆ ತರಲು ಸರಕಾರ ಬದ್ಧವಾಗಿದೆ. ಆನ್ಲೈನ್ ಲಾಟರಿ ವಿರೋಧಿಸುವುದರಲ್ಲಿ ಅರ್ಥವೇ ಇಲ್ಲ. ಆನ್ಲೈನ್ ಲಾಟರಿ ಬೇಡ ಎನ್ನುವುದಾದರೆ, ಎಂ.ಎಸ್.ಐ.ಎಲ್. ಲಾಟರಿ ಹಾಗೂ ರೇಸ್ ಕೂಡ ಇರಬಾರದು.
- ಪಶು ವಿಶ್ವವಿದ್ಯಾಲಯ ಸ್ಥಾಪಿಸುವ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುವುದು.
- ರಾಜ್ಯದ ರೈತರ ಬದುಕು ಹಸನಾಗಿಸಲು ಮತ್ತು ಪಹಣಿಗಾಗಿ ಅಲೆಯುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುವುದು.
ವಾರ್ತಾಸಂಚಯ
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications