ಸ್ವಯಂ ನಿವೃತ್ತಿ ಯೋಜನೆ ರಾಜ್ಯ ಸರಕಾರದ ಮುಂದಿಲ್ಲ: ಕೃಷ್ಣ
ಬೆಂಗಳೂರು: ರಾಜ್ಯ ಸರಕಾರಿ ನೌಕರರಿಗೆ ಸ್ವಯಂ ನಿವೃತ್ತಿ ಯೋಜನೆ (ವಿಆರ್ಎಸ್) ಘೋಷಿಸುವ ಯಾವುದೇ ಪ್ರಸ್ತಾಪ ಸದ್ಯಕ್ಕೆ ರಾಜ್ಯ ಸರಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಕೃಷ್ಣ ಹೇಳಿದ್ದಾರೆ. ಆದರೆ, ಹಾಲಿ ಇರುವ ಸಿಬ್ಬಂದಿಯನ್ನು ಕಡಿತಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಸ್ಪಂದನ ರಹಿತ ಹಾಗೂ ಅಸಮರ್ಥ ಸಿಬ್ಬಂದಿ ಪಡೆಯನ್ನು ನಿಯಂತ್ರಿಸಲು ಕರ್ನಾಟಕ ಲೋಕಸೇವೆಯ ನೇಮಕಾತಿ (ಕೆಸಿಎಸ್ಆರ್) ನಿಯಮಗಳಿಗೆ ಶೀಘ್ರವೇ ತಿದ್ದುಪಡಿ ತರಲಾಗುವುದು ಎಂದು ಪಿ.ಟಿ.ಐ.ಗೆ ನೀಡಿರುವ ಸಂದರ್ಶನದಲ್ಲಿ ಕೃಷ್ಣ ಹೇಳಿದ್ದಾರೆ.
ಕರ್ನಾಟಕ ಲೋಕ ಸೇವೆ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಸೂಚಿಸಲು ನೇಮಿಸಲಾಗಿದ್ದ ಸಂಪುಟದ ಉಪಸಮಿತಿಯು ತನ್ನ ವರದಿ ನೀಡಿದೆ. ನಾವು ಸಂಬಳದ ಮೊತ್ತವನ್ನು ಹೇಗೆ ಕಡಿಮೆ ಮಾಡುವುದು ಎಂಬ ಬಗ್ಗೆ ಚಿಂತಿಸುತ್ತಿದ್ದೇವೆ ಎಂದು ಕೃಷ್ಣ ಹೇಳಿದರು. ಸರಕಾರವು ಸಾಲ ಸೇವೆಗಳು ಮತ್ತು ಪಿಂಚಣಿಯ ವೆಚ್ಚವನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸುವುದಿಲ್ಲ ಎಂದರು.
ಕೇಂದ್ರ ಸರಕಾರ ಜಾರಿಗೆ ತಂದಿರುವ ಸ್ವಯಂ ನಿವೃತ್ತಿ ಯೋಜನೆಯ ವಿವರಗಳನ್ನು ತಾವು ಅಧ್ಯಯನ ಮಾಡುವುದಾಗಿ ಹೇಳಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಮಾಡಿಕೊಳ್ಳುವ ಹೊಸ ನೇಮಕಾತಿಗಳು ರಾಜ್ಯ ಸಚಿವ ಸಂಪುಟದ ಸಮರ್ಥನೆಗೆ ಒಳಪಡಬೇಕು ಎಂಬ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದರು.
ಖಾಸಗೀಕರಣ ಪ್ರಯತ್ನವೂ ವಿಫಲವಾಗಿ, ಮುಚ್ಚಲಾಗುತ್ತಿರುವ ಸಾರ್ವಜನಿಕ ವಲಯದ ಉದ್ದಿಮೆಗಳಲ್ಲಿ ಮಾತ್ರ ಸ್ವಯಂ ನಿವೃತ್ತಿ ಯೋಜನೆ ಜಾರಿಗೆ ತರಲಾಗಿದೆ ಎಂದು ಕೃಷ್ಣ ಹೇಳಿದರು. ಅಗತ್ಯ ಸೇವೆಗಳಾದ ಆರೋಗ್ಯ, ಪ್ರಾಥಮಿಕ ಶಿಕ್ಷಣ ಮತ್ತು ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ನಡೆಯುತ್ತದೆ ಇದೆ ಎಂದೂ ವಿವರಿಸಿದರು.
(ಪಿ.ಟಿ.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications