ಅಮೆರಿಕಕ್ಕೆ ತಕ್ಕ ಉತ್ತರ ಕೊಡುತ್ತೇವೆ: ತಾಲಿಬಾನ್ ಸಚಿವ ಸಂಪುಟ
ಇಸ್ಲಾಮಾಬಾದ್ : ಅಮೆರಿಕ ನೇತೃತ್ವದ ಪಡೆಗಳ ದಾಳಿಗೆ ತಕ್ಕ ಉತ್ತರ ನೀಡುವುದಾಗಿ ತಾಲಿಬಾನ್ ಹೇಳಿದೆ. ಭಾನುವಾರದ ದಾಳಿಯ ಹಿನ್ನೆಲೆಯಲ್ಲಿ ತನ್ನ ನಿಲುವು ಬದಲಾಯಿಸುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ. ಸೋಮವಾರ ನಡೆದ ತುರ್ತು ಸಂಪುಟ ಸಭೆಯಲ್ಲಿ ಹೋರಾಟದ ನಿರ್ಧಾರ ಕೈಗೊಳ್ಳಲಾಗಿದೆ.
ಒಸಾಮಾ ಬಿನ್ ಲಾಡೆನ್ನನ್ನು ರಕ್ಷಿಸುವ ತನ್ನ ನಿಲುವಿಗೆ ತಾಲಿಬಾನ್ ಅಂಟುಕೊಂಡಿದೆ ಎಂದು ವರದಿಗಳು ಹೇಳಿವೆ. ಅಮೆರಿಕ ಮತ್ತು ಬಿಟ್ರನ್ನ ದಾಳಿ ವಿರುದ್ಧ ಉಗ್ರ ಹೋರಾಟಕ್ಕೆ ತಾನು ಸಿದ್ಧವಾಗಿರುವುದಾಗಿ ತಾಲಿಬಾನ್ ಪ್ರಕಟಿಸಿದೆ ಎಂಬ ಸುದ್ದಿ ಆಫ್ಘನ್ ಇಸ್ಲಾಮಿಕ್ ಪ್ರೆಸ್ನಲ್ಲಿ ವರದಿಯಾಗಿದೆ.
ಸೋಮವಾರದ ಸಭೆಯಲ್ಲಿ ಮಿಲಿಟರಿ ಕಾರ್ಯಾಚರಣೆ ಮತ್ತು ರಾಜಕೀಯ ತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಮಿಲಿಟರಿ ಪಡೆಗಳನ್ನು ಆಯಕಟ್ಟಿನ ಸ್ಥಳಗಳಲ್ಲಿ ಪುನರ್ ನಿಯೋಜನೆ ಮಾಡಲಾಗಿದೆ. ನಾವೂ ಪ್ರತಿದಾಳಿಯ ತಂತ್ರಗಳನ್ನು ರೂಪಿಸಿದ್ದೇವೆ ಎಂದು ತಾಲಿಬಾನ್ ವಕ್ತಾರರು ಹೇಳಿದ್ದಾರೆ.
- ತಾಲಿಬಾನ್ ತನ್ನ ಯಾವುದೇ ವಿಮಾನವನ್ನೂ ಹೊಡೆದುರುಳಿಸಿಲ್ಲ ಎಂದು ಅಮೆರಿಕಾ ಹೇಳಿದೆ.
- ತನ್ನ ನೇತೃತ್ವದಲ್ಲಿ ಬ್ರಿಟನ್ನೊಂದಿಗೆ ಸೇರಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ಫಲಪ್ರದವಾಗಿದೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಡೊನಾಲ್ಡ್ ರಮ್ಸ್ ಫೀಲ್ಡ್ ಪ್ರಕಟಿಸಿದ್ದಾರೆ.
- ಆಫ್ಘನ್ ಮೇಲೆ ನಡೆದಿರುವ ದಾಳಿಗೆ ಪ್ರತಿದಾಳಿ ನಡೆಸುವುದಾಗಿ ತಾಲಿಬಾನ್ ಆಡಳಿತ ಅಮೆರಿಕ ಮತ್ತು ಮಿತ್ರರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದೆ. ಭಾನುವಾರದ ದಾಳಿಯ ಸಮಯದಲ್ಲಿ ಒಂದು ಅಮೆರಿಕದ ವಿಮಾನವನ್ನು ಹೊಡೆದುರುಳಿಸಿರುವುದಾಗಿಯೂ ಅದು ಘೋಷಿಸಿದೆ.
- ಭಾನುವಾರ ತನ್ನ ನೆಲದ ಮೇಲೆ ಅಮೆರಿಕ ನಡೆಸಿದ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಒಟ್ಟು 30 ಆಫ್ಘನ್ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಆಫ್ಘನ್ ಅಧಿಕೃತವಾಗಿ ಪ್ರಕಟಿಸಿದೆ.
- ಭಯೋತ್ಪಾದಕರು ಮತ್ತೆ ಅಮೆರಿಕ ಮೇಲೆ ದಾಳಿ ಮಾಡಬಹುದೆಂಬ ಸುಳಿವಿನ ಹಿನ್ನೆಲೆಯಲ್ಲಿ ಅಮೆರಿಕಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ.
- ಯುದ್ಧ ಪರಿಸ್ಥಿತಿಯ ಅಧ್ಯಯನಕ್ಕೆ ತೆರಳುತ್ತಿದ್ದ 6 ಮಂದಿ ವಿಶ್ವಸಂಸ್ಥೆ ವೀಕ್ಷಕರಿದ್ದ ಹೆಲಿಕಾಪ್ಟರ್ ಅನ್ನು ಚೆಚೆನ್ ಬಂಡುಕೋರರು ಹೊಡೆದುರುಳಿಸಿದ್ದಾರೆ. ಈ ಘಟನೆಯಲ್ಲಿ 9 ಜನರು ಬಲಿಯಾಗಿದ್ದಾರೆ.
- ಎಲ್ಲ ವಿಧದ ಭಯೋತ್ಪಾದನೆಯನ್ನೂ ಖಂಡಿಸಿರುವ ಚೀನಾ, ಭಯೋತ್ಪಾದಕರ ನೆಲೆಗಳ ಮೇಲೆ ಮಾತ್ರ ದಾಳಿ ಮಾಡುವಂತೆ ಅಮೆರಿಕೆಗೆ ಹೇಳಿದೆ.
- ಆಪ್ಘನ್ ಮೇಲೆ ನಡೆಯುತ್ತಿರುವ ಯುದ್ಧವನ್ನು ಮುಸ್ಲಿಂ ರಾಷ್ಟ್ರಗಳು ಪ್ರತಿಭಟಿಸಬೇಕು ಎಂದು ಸದ್ದಾಂ ಹುಸೇನ್ ಕರೆ ನೀಡಿದ್ದಾರೆ.
- ಆಫ್ಘನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ನಾಗಸಾಕಿಯ ಮೇಯರ್ ಇಟ್ಕೋ ಇಟೋ ಎಚ್ಚರಿಕೆ ನೀಡಿದ್ದಾರೆ.
- ಇದು ತಾಲಿಬಾನ್ನ ಸ್ವಯಂಕೃತ ಅಪರಾಧ. ಸುಂದರ ಆಫ್ಘನ್ ಸ್ಮಶಾಣವಾಗಲು ತಾಲಿಬಾನ್ ಕಾರಣ ಎಂದು ಪದಚ್ಯುತ ದೊರೆ ಮೊಹಮ್ಮದ್ ಜಾಹಿರ್ ಶಾ ಹೇಳಿದ್ದಾರೆ.
- ಯುದ್ಧ ಆರಂಭವಾಗಿರುವ ಹಿನ್ನೆಲೆಯಲ್ಲಿ ವಾಯವ್ಯ ಪಾಕಿಸ್ತಾನ ಭಾಗದ ಎಲ್ಲ ವಿದ್ಯಾಸಂಸ್ಥೆಗಳನ್ನೂ ಅನಿರ್ದಿಷ್ಟಕಾಲದವರೆಗೆ ಮುಚ್ಚಲಾಗಿದೆ ಎಂದು ವರದಿಗಳು ಹೇಳಿವೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications