ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಯೋತ್ಪಾದನೆ ವಿರುದ್ಧ ಸಮರ: ರಾಜ್ಯದಲ್ಲಿ ಬಿಗಿ ಬಂದೋಬಸ್ತ್‌

By Staff
|
Google Oneindia Kannada News

ಬೆಂಗಳೂರು : ಅಮೇರಿಕಾ ನೇತೃತ್ವದಲ್ಲಿ ಆಫ್ಘಾನಿಸ್ತಾನದ ಮೇಲೆ ಸತತ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಯೋತ್ಪಾದಕರು ಹಾಗೂ ಸಮಾಜಘಾತುಕ ಶಕ್ತಿಗಳು ರಾಜ್ಯದಲ್ಲೂ ದುಷ್ಕೃತ್ಯ ಎಸಗಬಹುದು ಎಂಬ ಶಂಕೆಯಿಂದ ಬಿಗಿ ಬಂದೋಬಸ್ತ್‌ ಮಾಡಲಾಗಿದೆ ಎಂದು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನ ಭವ್ಯ ಕಟ್ಟಡಗಳಾದ ವಿಧಾನಸೌಧ, ಉಚ್ಚನ್ಯಾಯಾಲಯ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳು ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ ಎಂದು ಖರ್ಗೆ ಮಂಗಳವಾರ ತಿಳಿಸಿದ್ದಾರೆ.

ಯಾವುದೇ ವಿಧ್ವಂಸಕ ಘಟನೆಗಳು ನಡೆಯದಂತೆ ಸಂಪೂರ್ಣ ಕಟ್ಟೆಚ್ಚರದಿಂದಿರುವಂತೆ ಮತ್ತು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ. ರಾಜ್ಯದ ಬೇಹುಗಾರಿಕೆ (ಗುಪ್ತ)ದಳ ಚುರುಕಾಗಿದ್ದು, ಮಾಹಿತಿ ಸಂಗ್ರಹದಲ್ಲಿ ತೊಡಗಿದೆ ಎಂದು ಖರ್ಗೆ ವಿವರಿಸಿದರು.

(ಇನ್‌ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X