ಚನ್ನಪಟ್ಟಣ ರೈತರ ಮೇಲೆ ಗೋಲಿಬಾರ್: ನ್ಯಾಯಾಂಗ ತನಿಖೆ ನಿರ್ಧಾರ
ಬೆಂಗಳೂರು : ಪ್ರತಿಭಟನಾನಿರತ ರೈತರ ಮೇಲೆ ಚನ್ನಪಟ್ಟಣ ತಾಲೂಕು ವಿಟ್ನೇನಹಳ್ಳಿ (ಡಿ.ವಿ. ಹಳ್ಳಿ) ಗ್ರಾಮದಲ್ಲಿ ಮಂಗಳವಾರ ನಡೆದ ಗೋಲಿಬಾರ್ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಈ ವಿಷಯವನ್ನು ರಾಜ್ಯ ವಾರ್ತಾ ಸಚಿವ ಶಿವಣ್ಣ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಗೋಲಿಬಾರ್ನಿಂದ ಒಬ್ಬರು ಸಾವನ್ನಪ್ಪಿದ್ದು, ಹಲವಾರು ಮಂದಿ ರೈತರು ಗಾಯಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೃಷ್ಣ ಅವರು ಉನ್ನತ ಅಧಿಕಾರಿಗಳು ಹಾಗೂ ಹಿರಿಯ ಸಚಿವರೊಂದಿಗೆ ಸಮಾಲೋಚನೆ ನಡೆಸಿದರು. ಸಚಿವ ಸಂಪುಟದ ಸಭೆಯಲ್ಲೂ ಚರ್ಚಿಸಿದರು. ಸಂಪುಟ ಸಭೆಗೆ ಮೊದಲು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್, ಹಿರಿಯ ಸಚಿವರಾದ ಎಚ್.ಕೆ. ಪಾಟೀಲ್, ಪೊಲೀಸ್ ಮಹಾನಿರ್ದೇಶಕ ವಿವಿ. ಭಾಸ್ಕರ್, ಗೃಹ ಕಾರ್ಯದರ್ಶಿ ಪ್ರಕಾಶ್ ಅವರೊಂದಿಗೆ ಕೃಷ್ಣ ಸುದೀರ್ಘ ಚರ್ಚೆ ನಡೆಸಿದರು.
ಎಸ್.ಐ. ಅಮಾನತು: ಚನ್ನಪಟ್ಟಣ ತಾಲೂಕಿನ ವಿಟ್ನೇನಹಳ್ಳಿಯಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿ ರೈತರೊಬ್ಬರ ಸಾವಿಗೆ ಕಾರಣರಾದ ಅಕ್ಕೂರು ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ರಾಜೇಂದ್ರಕುಮಾರ್ ಅವರನ್ನು ಸರಕಾರ ಅಮಾನತ್ತಿನಲ್ಲಿಟ್ಟಿದೆ. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನಡೆದ ಹಿರಿಯ ಅಧಿಕಾರಿಗಳು ಹಾಗೂ ಸಚಿವರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು ಎಂದು ಖರ್ಗೆ ಹೇಳಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ
/
ಇವತ್ತು...
ಈ
ಹೊತ್ತು...