ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಸ್ತವ ಸ್ಥಿತಿಯನುಸಾರ ತಮಿಳುನಾಡಿಗೆ ಕಾವೇರಿ ನೀರು - ಕೃಷ್ಣ

By Staff
|
Google Oneindia Kannada News

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡುವ ಕುರಿತಂತೆ ಕಾವೇರಿ ಪ್ರಾಧಿಕಾರ ನೀಡಿರುವ ನಿರ್ದೇಶನವನ್ನು , ವಾಸ್ತವ ಸ್ಥಿತಿ ಹಾಗೂ ತನ್ನ ಮಿತಿಗಳ ಚೌಕಟ್ಟಿನಲ್ಲಿ ರಾಜ್ಯ ಸರ್ಕಾರ ಪರಿಶೀಲಿಸುವುದು ಎಂದು ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಹೇಳಿದ್ದಾರೆ.

ಈ ವರ್ಷ ಎಂದಿನಂಥಲ್ಲ . ರಾಜ್ಯದ ಯಾವುದೇ ಜಲಾಶಯವೂ ತುಂಬಿಲ್ಲ . ಈ ವಿಷಯವನ್ನು ಪ್ರಾಧಿಕಾರದ ಸಭೆಯಲ್ಲಿ ಪ್ರಧಾನಿಗಳ ಗಮನಕ್ಕೆ ತರಲಾಗಿದೆ. ವಾಸ್ತವಾಂಶವನ್ನು ಅರ್ಥ ಮಾಡಿಕೊಳ್ಳಲು ಯಾರಾದಲೂ ವಿಫಲರಾದಲ್ಲಿ ತಮಗೆ ಮಾಡಲೇನೂ ಉಳಿದಿಲ್ಲ ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಕೃಷ್ಣ ಹೇಳಿದರು.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆ ಉಂಟಾಗಿರುವುದರಿಂದ ತಮಿಳುನಾಡಿಗೆ ನೀರು ಬಿಡಲು ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕ ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸಿತು. ರಾಜ್ಯದಲ್ಲಿ ಮಾನ್ಸೂನ್‌ ಅವಧಿ ಮುಕ್ತಾಯವಾಗಿದ್ದು , ತಮಿಳುನಾಡಿನಲ್ಲಿ ಮಾನ್ಸೂನ್‌ ಈಗಷ್ಟೇ ಆರಂಭವಾಗಿದೆ ಎಂದು ಕೃಷ್ಣ ಹೇಳಿದರು.

(ಪಿಟಿಐ)

ಮುಖಪುಟ / ಕೃಷ್ಣಗಾರುಡಿಯ ಕನ್ನಡಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X