ಒಸಾಮನ ಶಿಕಾರಿಗೆ ಎರಡು ವರ್ಷ ಬೇಕಾಗಬಹುದು- ಬುಷ್
ಒಸಾಮ ಹಾಗೂ ಆತನ ಉಗ್ರಗಾಮಿ ಜಾಲವನ್ನು ಮಟ್ಟ ಹಾಕಲು ಇನ್ನು ಒಂದು ಅಥವಾ ಎರಡು ವರ್ಷದ ಅವಧಿ ಬೇಕಾದೀತು. ಆದರೆ ಕಳೆದ ಐದು ದಿನಗಳಿಂಗ ಆಫ್ಘಾನಿಸ್ತಾನದ ಮೇಲೆ ನಾವು ಬಾಂಬ್ ದಾಳಿ ನಡೆಸಿರುವುದು ಒಸಾಮನನ್ನು ಮಟ್ಟ ಹಾಕುವ ಹಾದಿಯಲ್ಲಿ ಸಾಕಷ್ಟು ಉಪಯುಕ್ತವಾಗಿದೆ ಎಂದು ಅಮೆರಿಕಾ ಅಧ್ಯಕ್ಷ ಜಾರ್ಜ್ ಡಬ್ಲ್ಯು ಬುಷ್ ಶುಕ್ರವಾರ ತಿಳಿಸಿದ್ದಾರೆ.
ಸೆಪ್ಟೆಂಬರ್ 11ರ ನಂತರ ಇದೇ ಮೊದಲ ಬಾರಿಗೆ ಶ್ವೇತಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಬುಷ್, ಒಸಾಮ ಬದುಕಿದ್ದಾನೋ, ಸತ್ತಿದ್ದಾನೋ ಗೊತ್ತಿಲ್ಲ. 5 ಸಾವಿರ ಅಮಾಯಕರ ಸಾವಿಗೆ ಕಾರಣವಾಗಿದ್ದಾನೆ ಎಂದು ನಂಬಲಾಗಿರುವ ಆ ಪಾತಕಿಯನ್ನು ನ್ಯಾಯಾಂಗಕ್ಕೆ ಒಪ್ಪಿಸುವುದು ನಮ್ಮ ಉದ್ದಿಶ್ಯ ಎಂದರು.
ಪ್ರಾಯಶಃ ಇನ್ನು ನಮ್ಮ ಮೇಲೆ ದಾಳಿ ಮಾಡುವ ದುಸ್ಸಾಹಸಕ್ಕೆ ಭಯೋತ್ಪಾದಕರು ಕೈಹಾಕುವುದಿಲ್ಲ. ಹಾಗಂತ ನಾವು ಸುಮ್ಮನೆ ಕೂತಿಲ್ಲ. ಪಾಪಿಗಳ ಮನಸ್ಸು ಸದಾ ಕೇಡು ಬಯಸುತ್ತದೆ. ನಮ್ಮ ಬೇಹುಗಾರಿಕಾ ದಳಗಳು ಮೈಯೆಲ್ಲಾ ಕಣ್ಣಾಗಿಸಿಕೊಂಡಿದ್ದು, ಯಾವುದಾದರೂ ಕಟ್ಟಡದ ಮೇಲೆ ದಾಳಿ ನಡೆಯುವ ಸೂಚನೆ ಸಿಕ್ಕಿದರೂ ನಾಗರಿಕರಿಗೆ ಸಂಪೂರ್ಣ ರಕ್ಷಣೆ ಒದಗಿಸುತ್ತೇವೆ ಎಂದು ಭರವಸೆ ಕೊಟ್ಟರು.
ಒಸಾಮ ಅಂಡ್ ಕಂಪನಿಯನ್ನು ಈಗಲೂ ನಮಗೆ ಒಪ್ಪಿಸಲಿ. ಆಗ ಆಫ್ಘಾನಿಸ್ತಾನದ ಮೇಲಿನ ದಾಳಿಯನ್ನು ನಿಲ್ಲಿಸುತ್ತೇವೆ. ತಾಲಿಬಾನ್ ಸರ್ಕಾರ ಪತನವಾಗುವ ದಿನ ಹತ್ತಿರಾಗುತ್ತಿದೆ. ಅಮೆರಿಕಾ ನೇತೃತ್ವದ ಮಿಲಿಟರಿ ದಾಳಿಯ ಉದ್ದಿಶ್ಯ ಈಡೇರಿದ ನಂತರ ವಿಶ್ವಸಂಸ್ಥೆ ಸಹಾಯದಿಂದ ಆಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ರಚಿಸಲಾಗುವುದು. ಜೊತೆಗೆ ಅಲ್-ಖೈದಾ ಸಂಘಟನೆಗಳ ಜಾಗತಿಕ ಶೋಧ ನಡೆದಿದ್ದು, ಅವುಗಳನ್ನೂ ಮಟ್ಟಹಾಕಲಾಗುವುದು ಎಂದು ಬುಷ್ ಹೇಳಿದರು.
(ಏಜೆನ್ಸೀಸ್)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications