ಕಾವೇರಿ: ಸುಪ್ರೀಂ ಕೋರ್ಟ್ ಮೊರೆ ಹೋದ ತಮಿಳುನಾಡು
ನವದೆಹಲಿ : ಕಾವೇರಿ ನದಿ ಪ್ರಾಧಿಕಾರದ ಸಭೆ ವಿಫಲವಾದ ಬಳಿಕ, ಒಣಗುತ್ತಿರುವ ಕುರುವೈ ಬೆಳೆಗೆ ನಿತ್ಯ 1 ಟಿ.ಎಂ.ಸಿ. ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ಈ ಸಂಬಂಧ ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯಲ್ಲಿ ಕರ್ನಾಟಕ ಸರಕಾರವು ಬೇಸಿಗೆಯ ಬೆಳಗೆ ಈಗಿನಿಂದಲೇ ನೀರು ಸಂಗ್ರಹಿಸುತ್ತಿದ್ದು, ತಮಿಳುನಾಡಿನಲ್ಲಿ ಬೆಳೆದು ನಿಂತು ನೀರಿಲ್ಲದೆ ಒಣಗುತ್ತಿರುವ ಕುರುವೈ ಬೆಳೆಗೆ ನೀರು ನೀಡಲು ನಿರಾಕರಿಸುತ್ತಿದೆ ಎಂದು ಆರೋಪಿಸಿದೆ.
ತಮಿಳುನಾಡಿನ ಅರ್ಜಿಯನ್ನು ಅಂಗೀಕರಿಸಿರುವ ನ್ಯಾಯಮೂರ್ತಿಗಳಾದ ಎಸ್.ಪಿ. ಭರೂಚಾ ಮತ್ತು ನ್ಯಾ. ವೈ.ಕೆ. ಸಬರ್ವಾಲ್ ಅವರನ್ನು ಒಳಗೊಂಡ ನ್ಯಾಯಪೀಠವು ಅಕ್ಟೋಬರ್ 29ರಂದು ಅರ್ಜಿಯ ವಿಚಾರಣೆಯನ್ನು ಸೂಕ್ತ ನ್ಯಾಯಪೀಠ ಕೈಗೆತ್ತಿಕೊಳ್ಳುವುದು ಎಂದು ತಿಳಿಸಿದೆ.
ಕರ್ನಾಟಕವು ಕಳೆದ ಜೂನ್, ಜುಲೈ, ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ಮೆಟ್ಟೂರು ಜಲಾಶಯಕ್ಕೆ ನೀರು ಬಿಟ್ಟಿಲ್ಲ. ಹೀಗಾಗಿ ತಮಿಳುನಾಡಿನ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ ಎಂದು ತನ್ನ ಅರ್ಜಿಯಲ್ಲಿ ತಿಳಿಸಿದೆ. ಕಾವೇರಿ ನದಿ ನೀರು ಹೆಂಚಿಕೆಗೆ ಸಂಬಂಧಿಸಿದಂತೆ ನ್ಯಾಯಮಂಡಳಿ ನೀಡಿರುವ ಮಧ್ಯಂತರ ತೀರ್ಪನ್ನು ಕರ್ನಾಟಕ ಉಲ್ಲಂಘಿಸಿದೆ ಎಂದೂ ಅದು ಅಪಾದಿಸಿದೆ.
(ಪಿ.ಟಿ.ಐ)
ಮುಖಪುಟ / ಇವತ್ತು... ಈ ಹೊತ್ತು...