Get Updates
Get notified of breaking news, exclusive insights, and must-see stories!

ಹೈದರಾಬಾದ್‌ ಕರ್ನಾಟಕದಲ್ಲಿ ಮಕ್ಕಳ ಸಾಹಿತ್ಯ ಕಮ್ಮಟ

ಪುತ್ತೂರು : ಹೈದರಾಬಾದ್‌ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಮಕ್ಕಳ ಸಾಹಿತ್ಯ ಕಮ್ಮಟವನ್ನು ಏರ್ಪಡಿಸಲು ಕರ್ನಾಟಕ ಸಾಹಿತ್ಯ ಅಕಾಡೆಮಿ ನಿರ್ಧರಿಸಿದೆ.

ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಗುರುಲಿಂಗ ಕಾಪಸೆ ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಗಡಿನಾಡಿನಲ್ಲಿ ನಡೆಯುವ ಈ ಕಾರ್ಯಕ್ರಮದ ಉದ್ದೇಶ ಭಾಷೆ ಮತ್ತು ಸಂಸ್ಕೃತಿಯ ವಿನಿಮಯ. ಇದೇ ದೃಷ್ಟಿಯಿಟ್ಟುಕೊಂಡು ಗಡಿ ಪ್ರದೇಶಗಳಲ್ಲಿ ಮಲಯಾಳಂ, ತೆಲುಗು, ಮರಾಠಿ ಭಾಷಾ ಸಾಹಿತ್ಯಿಕ ಚಟುವಟಿಕೆಗಳನ್ನೂ ನಡೆಸುವ ಉದ್ದೇಶ ಅಕಾಡೆಮಿಗಿದೆ.

ಇದಲ್ಲದೆ 20ನೇ ಶತಮಾನದ ಸಾಹಿತ್ಯದ ಕುರಿತು 8 ಸಂಪುಟಗಳ ಗ್ರಂಥವೊಂದನ್ನು ಬಿಡುಗಡೆ ಮಾಡಲು ಅಕಾಡೆಮಿ ಎಲ್ಲ ಸಿದ್ಧತೆಗಳನ್ನೂ ನಡೆಸುತ್ತಿದೆ. ಕನ್ನಡ ಸಾಹಿತ್ಯ ಅಕಾಡೆಮಿ ಜನತೆಯ ಅಕಾಡೆಮಿಯಾಗಬೇಕು. ಈ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗಿದ್ದೇವೆ ಎಂದು ಕಾಪಸೆ ಅಭಿಪ್ರಾಯಪಟ್ಟರು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+