ಏಳು ಯಕ್ಷಗಾನ ಪ್ರಸಂಗಗಳಿಗೆ ಸೆಷನ್ಸ್ ನ್ಯಾಯಾಲಯದಿಂದ ತಡೆಯಾಜ್ಞೆ
ಉಡುಪಿ : ಡಾ. ಶಿವರಾಮ ಕಾರಂತರು ನಿರ್ದೇಶಿಸಿದ್ದ ಯಕ್ಷರಂಗದ ಏಳು ಪ್ರಸಂಗಗಳನ್ನು ಪ್ರದರ್ಶಿಸಬಾರದೆಂದು ಉಡುಪಿ ಯಕ್ಷಗಾನ ಕೇಂದ್ರದ ಕಲಾವಿದರ ತಂಡಕ್ಕೆ ಮಂಗಳೂರಿನ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ಈ ಕುರಿತ ಮುಂದಿನ ವಿಚಾರಣೆ ನವೆಂಬರ್ ಏಳರಂದು ನಡೆಯಲಿದೆ. ನ್ಯಾಯಾಧೀಶ ಎಂ. ಎಸ್. ಬಾಲಕೃಷ್ಣ ಅವರು ಬುಧವಾರ ನೀಡಿದ ಆದೇಶದಲ್ಲಿ ಕಾರಂತರು ನಿರ್ದೇಶಿಸಿದ ಭೀಷ್ಮ ವಿಜಯ, ಅಭಿಮನ್ಯು ವಧೆ, ಕನಕಾಂಗಿ, ನಳ ದಮಯಂತಿ, ಚಿತ್ರಾಂಗದೆ, ಪಂಚವಟಿ ಹಾಗೂ ಗಯ ಚರಿತ್ರೆ ಪ್ರಸಂಗಗಳನ್ನು ಪ್ರದರ್ಶಿಸಬಾರದು ಎಂದು ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದಾರೆ.
ಡಾ. ಕಾರಂತರು ತಮ್ಮ ಉಯಿಲಿನಲ್ಲಿ, ಈ ಪ್ರಸಂಗಗಳ ಸಂಪೂರ್ಣ ಹಕ್ಕನ್ನು ಬಿ. ಮಾಲಿನಿ ಮಲ್ಯ ಅವರಿಗೆ ನೀಡಿದ್ದಾರೆ. ಉಡುಪಿ ಯಕ್ಷಗಾನ ಕೇಂದ್ರವು ಕಳೆದ ತಿಂಗಳು ಅಭಿಮನ್ಯು ವಧೆ ಪ್ರಸಂಗವನ್ನು ದೆಹಲಿಯಲ್ಲಿ ಪ್ರಸ್ತುತಪಡಿಸಿತ್ತು. ಈ ಬಗ್ಗೆ ಮಾಲಿನಿ ಮಲ್ಯ ಅವರು ಕೋರ್ಟ್ನಲ್ಲಿ ತಡೆಯಾಜ್ಞೆ ಕೋರಿ ದಾವೆ ಹೂಡಿದ್ದರು. ಈ ದಾವೆಯಲ್ಲಿ ಯಕ್ಷಗಾನ ಕೇಂದ್ರವನ್ನು ನಡೆಸುತ್ತಿರುವ ಮಣಿಪಾಲ ಎಜುಕೇಷನ್ ಹಾಗೂ ಎಂಜಿಎಂ ಕಾಲೇಜು ಟ್ರಸ್ಟ್ಗಳ ಅಧ್ಯಕ್ಷರನ್ನೂ ಪ್ರತಿವಾದಿಗಳೆಂದು ಗುರುತಿಸಲಾಗಿದೆ.(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications