ನವೆಂಬರ್ 10ರಿಂದ ಚಿಕ್ಕಮಗಳೂರಿನಲ್ಲಿ ರಾಜ್ಯ ಗಮಕ ಸಮ್ಮೇಳನ
ಚಿಕ್ಕಮಗಳೂರು : ರಾಜ್ಯ ಗಮಕಕಲಾ ಪರಿಷತ್ ಎರಡು ದಿನಗಳ ರಾಜ್ಯಮಟ್ಟದ ಗಮಕ ಸಮ್ಮೇಳನವನ್ನು ನಗರದಲ್ಲಿ ನವೆಂಬರ್ 10ರಿಂದ ಯೋಜಿಸಿದೆ.
ಗಮಕಕಲಾ ಪರಿಷತ್ ಆಯೋಜಿಸುತ್ತಿರುವ ಆರನೇ ರಾಜ್ಯ ಸಮ್ಮೇಳನ ಇದಾಗಿದ್ದು, ಕವಿ ಸ್ಮರಣೆಯ ಕುರಿತು ಐದು ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ಗಮಕ ಹಾಡುಗಾರಿಕೆ ಮತ್ತು ವಿವಿಧ ಭಾಷೆಗಳಲ್ಲಿ ಗಮಕಗಳ ಪರಿಚಯ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಗಮಕ ಕಲೋಪಾಸಕರು ಪುಸ್ತಕವನ್ನೂ ಬಿಡುಗಡೆ ಮಾಡಲಾಗುವುದು ಎಂದು ಪರಿಷತ್ತಿನ ಪ್ರಕಟಣೆ ತಿಳಿಸಿದೆ.
ಸಮ್ಮೇಳನದಲ್ಲಿ ರಾಜ್ಯದ ಹಿರಿಯ ಗಮಕ ಕಲಾವಿದರು ಭಾಗವಹಿಸುವರು. ಹೊಳೆನರಸೀಪುರದ ವಿದುಷಿ ಪ್ರಿಯದರ್ಶಿನಿ ಐಯ್ಯಂಗಾರ್ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಪ್ರಿಯದರ್ಶಿನಿ ಅವರಿಗೆ ಗಮಕ ರತ್ನಾಕರ ಬಿರುದು ನೀಡಿ ಸನ್ಮಾನಿಸುವ ಕಾರ್ಯಕ್ರಮವೂ ಇದೆ.
ಗಮಕ ಕಲಾವಿದರಾದ, ಜಯಾ ರಾಜಶೇಖರ್, ಎನ್. ಕೆ. ಶ್ರೀರಂಗಮ್ಮ, ಜಯಮ್ಮ, ವಸಂತ ಲಕ್ಷ್ಮಿ ಸೀತಾರಾಮಯ್ಯ, ಕೆ.ಎನ್. ನರಸಿಂಹಮೂರ್ತಿ ರಾವ್, ರಮೇಶ್ ಚಂದ್ರ ಕುಲಕರ್ಣಿ ಮತ್ತು ಕೃಷ್ಣ ಮೂರ್ತಿ ಜೊತೆಗೆ ಚಿತ್ರದುರ್ಗದ ಗಮಕ ಕಲಾಭಿಮಾನಿಗಳ ಸಂಘವನ್ನು ಸ್ಮರಣಿಕೆ ನೀಡಿ ಸಮ್ಮೇಳನದಲ್ಲಿ ಗೌರವಿಸಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಸಚಿವೆ ರಾಣಿ ಸತೀಶ್ ಸಮ್ಮೇಳನವನ್ನು ಉದ್ಘಾಟಿಸುವರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications