ಎಡನೀರು ಮಠದಲ್ಲಿ ಕೇಶವಾನಂದಸ್ವಾಮೀಜಿಗಳಿಗೆ ಗುರುವಂದನೆ
ಕಾಸರಗೋಡು : ಗುರುವಿನ ಮೂಲಕ ಬದುಕಿನ ಅರ್ಥವನ್ನು ತಿಳಿದುಕೊಂಡು ಉನ್ನತಿ ಹೊಂದಿದಾಗ, ದಾರಿ ತೋರಿದ ಗುರುವನ್ನು ಸ್ಮರಿಸುವ ಗುರುವಂದನಾ ಪದ್ಧತಿ ಅತ್ಯಂತ ಶ್ರೇಷ್ಠವಾದುದು ಎಂದು ಬೇಲಿಮಠ ಚರಮೂರ್ತಿ ಶಿವರುದ್ರ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ಅವರು ಎಡನೀರು ಮಠದಲ್ಲಿ ಭಾನುವಾರ ನಡೆದ ಎಡನೀರು ಮಠಾಧೀಶ ಕೇಶಾವನಂದ ಭಾರತಿ ಸ್ವಾಮೀಜಿಯ 60ನೇ ವರ್ಧಂತಿ ಉತ್ಸವದಲ್ಲಿ ಮಾತನಾಡುತ್ತಿದ್ದರು. ಶಿಷ್ಯವರ್ಗದ ಏಳ್ಗೆಯನ್ನೇ ಬಯಸುವ ಗುರು ಋಣ ತೀರಿಸುವುದು ಕಷ್ಟಸಾಧ್ಯ. ಕೇಶವಾನಂದ ಸ್ವಾಮೀಜಿಗಳ 60ನೇ ಹುಟ್ಟು ಹಬ್ಬವನ್ನು ಆಚರಿಸುವ ಮೂಲಕ ಅವರ ಶಿಷ್ಯವರ್ಗ ಗುರುವಂದನೆ ಸಲ್ಲಿಸುವ ಪ್ರಯತ್ನ ನಡೆಸಿರುವುದು ಶ್ಲಾಘನಾರ್ಹ ಎಂದ ಶಿವರುದ್ರ ಸ್ವಾಮೀಜಿ, ಕೇಶಾವನಂದ ಸ್ವಾಮೀಜಿಗಳಿಗೆ ಹಾಗೂ ಶಿಷ್ಯವೃಂದಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ನಾಗಸಂದ್ರ ಮಠಾಧೀಶ ಸಿದ್ಧಲಿಂಗ ಸ್ವಾಮಿ, ಕಾಂಞಂಗಾಡು ಆನಂದಾಶ್ರಮದ ಸ್ವಾಮೀ ಮುಕ್ತಾನಂದರು ಕೇಶಾವನಂದ ಸ್ವಾಮೀಜಿಗಳನ್ನು ಅಭಿನಂದಿಸಿದರು. ಕರ್ಣಾಟಕ ಬ್ಯಾಂಕ್ ಅಧ್ಯಕ್ಷ ಅನಂತಕೃಷ್ಣ ಮುಖ್ಯ ಅತಿಥಿಗಳಾಗಿದ್ದರು. ಸಮರಾಂಭದ ಬಳಿಕ ಯಕ್ಷಕೂಟ, ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಉಜಿರೆ ಹಾಗೂ ತೆಂಕು-ಬಡಗುತಿಟ್ಟಿನ ಪ್ರಖ್ಯಾತ ಕಲಾವಿದರ ಕೂಡುವಿಕೆ ಯಿಂದ ಯಕ್ಷಗಾನ ಬಯಲಾಟ ನಡೆಯಿತು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications