ಕಾಶ್ಮೀರ : ಭಾರತದ ಸೇನಾ ದಾಳಿಗೆ 11 ಪಾಕ್ ನೆಲೆ ಧ್ವಂಸ
ನವದೆಹಲಿ: ‘ಜಮ್ಮು ಮತ್ತು ಕಾಶ್ಮೀರದಲ್ಲಿನ ಆಫ್ಘನ್ ಹಾಗೂ ಪಾಕ್ ಪ್ರಚೋದಿತ ಭಯೋತ್ಪಾದನೆ ವಿರುದ್ಧ ಸೇನಾ ಕಾರ್ಯಾಚರಣೆ ಅನಿವಾರ್ಯ’ ಎಂದು ಸಂಪುಟಕ್ಕೆ ಮರು ಸೇರ್ಪಡೆಯಾಗಿ, ರಕ್ಷಣೆಯ ಹೊಣೆಹೊತ್ತ ಜಾರ್ಜ್ ಫರ್ನಾಂಡಿಸ್ ಹೇಳಿದ ಕೆಲವೇ ಗಂಟೆಗಳಲ್ಲಿ ಭಾರತದ ದಾಳಿಗೆ ಪಾಕ್ನ 11 ನೆಲೆಗಳು ಧ್ವಂಸವಾಗಿವೆ.
ಜಮ್ಮು ಮತ್ತು ಕಾಶ್ಮೀರದ ಮೆಂಧರ್ ಮತ್ತು ಅಕ್ನೂರ್ ವಲಯದಲ್ಲಿ ಸೋಮವಾರ ರಾತ್ರಿ ಅತಿಕ್ರಮವಾಗಿ ಭಾರತ ಗಡಿಯಾಳಗೆ ನುಸುಳಲು ಯತ್ನಿಸುತ್ತಿದ್ದ ಭಯೋತ್ಪಾದಕರತ್ತ ಭಾರತ ಸೇನಾಪಡೆ ದಾಳಿ ನಡೆಸಿ, ಕನಿಷ್ಠ 12 ಉಗ್ರಗಾಮಿಗಳನ್ನು ಕೊಂದು ಹಾಕಿದೆ.
ಭಯೋತ್ಪಾದಕರ ಮೇಲೆ ಭಾರತ ಸೇನೆ ಗುಂಡು ಹಾರಿಸುತ್ತಿದ್ದಂತೆಯೇ ಪಾಕ್ ಸೈನಿಕರು ರಾಕೆಟ್ ಮತ್ತು ಭಾರಿ ಮಿಷಿನ್ ಗನ್ಗಳಿಂದ ಪ್ರತಿದಾಳಿ ನಡೆಸಿದರು. ಆದರೆ, ಭಾರತ ಸೈನಿಕರ ಸಮರ್ಥ ಷೆಲ್ ದಾಳಿಯಿಂದ 12 ಉಗ್ರರು ಸಾವನ್ನಪ್ಪಿದ್ದಲ್ಲದೆ, ಪಾಕ್ನ 11 ನೆಲೆಗಳು ಮತ್ತು ಬಂಕರ್ಗಳು ನಾಶವಾದವು.
ಸಂಯಮ ತೋರಿ - ಬುಷ್: ಭಯೋತ್ಪಾದನೆ ವಿರುದ್ಧ ಅಮೆರಿಕ ನೇತೃತ್ವದಲ್ಲಿ ಭಾರಿ ಸಮರವೇ ನಡೆಯುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಭಾರತ ಮತ್ತು ಪಾಕಿಸ್ತಾನಗಳೆರಡೂ ಸಂಯಮದಿಂದ ವರ್ತಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಕಾಶ್ಮೀರ ಗಡಿಯಲ್ಲಿ ಗುಂಡಿನ ಚಕಮಕಿ ನಡೆದ ಸುದ್ದಿ ಹೊರಬಿದ್ದ ಕೂಡಲೇ ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬುಷ್ ಎರಡೂ ರಾಷ್ಟ್ರಗಳಿಗೆ ತಾಳ್ಮೆಯಿಂದ ವರ್ತಿಸುವುದು ಅತಿ ಅವಶ್ಯಕ ಎಂದು ಅಭಿಪ್ರಾಯಪಟ್ಟಿದ್ದಾರೆ.
ಪಾಕ್ ಖಂಡನೆ : ಭಾರತೀಯ ಸೇನೆ ಅಪ್ರಚೋದಿತವಾಗಿ ದಾಳಿ ನಡೆಸಿದ್ದು, ಮಹಿಳೆಯಾಬ್ಬರು ಸಾವನ್ನಪ್ಪಿದ್ದು, 25 ನಾಗರಿಕರು ಗಾಯಗೊಂಡಿದ್ದಾರೆ ಎಂದು ಪಾಕ್ ಆರೋಪಿಸಿದೆ. ಸರಕಾರಿ ಪ್ರಚೋದಿತ ಭಯೋತ್ಪಾದನೆ ನಿಲ್ಲಿಸುವಂತೆ ಅದು ದೆಹಲಿ ಆಡಳಿತಕ್ಕೆ ಎಚ್ಚರಿಕೆ ನೀಡಿದೆ. ಸೇನಾ ವಕ್ತಾರ ಮೆ.ಜ. ರಷಿದ್ ಖುರೇಷಿ ದಾಳಿ ನಡೆದುದನ್ನು ದೃಢಪಡಿಸಿದ್ದಾರೆ.
(ಪಿ.ಟಿ.ಐ/ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications