ಕಾಶ್ಮೀರ ಮಾತುಕತೆ: ಪಾಕ್ ನಿಲುವು ಸಮರ್ಥಿಸಿದಕಾಲಿನ್ ಪೊವೆಲ್
ಇಸ್ಲಮಾಬಾದ್: ಭಾರತ ಹಾಗೂ ಪಾಕಿಸ್ತಾನ ನಡುವಣ ಮಾತುಕತೆಗಳಲ್ಲಿ ಕಾಶ್ಮೀರ ವಿವಾದವೇ ಕೇಂದ್ರಬಿಂದು ಎನ್ನುವ ಪಾಕಿಸ್ತಾನದ ನಿಲುವನ್ನು ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಕಾಲಿನ್ ಪೊವೆಲ್ ಒಪ್ಪಿಕೊಂಡಿದ್ದಾರೆ.
ಉಭಯ ರಾಷ್ಟ್ರಗಳ ನಡುವಣ ಸಂಬಂಧಕ್ಕೆ ಕಾಶ್ಮೀರ ಪ್ರಕರಣವೇ ಕೇಂದ್ರಬಿಂದು ಎನ್ನುವುದನ್ನು ನಾವು ಕೂಡ ನಂಬುತ್ತೇವೆ ಎಂದು, ಪಾಕಿಸ್ತಾನದ ಅಧ್ಯಕ್ಷ ಜನರಲ್ ಪರ್ವೇಜ್ ಮುಷರ್ರಫ್ ಅವರೊಂದಿಗೆ ಮಂಗಳವಾರ ಮಾತುಕತೆ ನಡೆಸಿದ ನಂತರ ಪೊವೆಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಭಾರತಕ್ಕೆ ಆಗಮಿಸುವ ಸ್ವಲ್ಪ ಸಮಯದ ಮುನ್ನ ಪೊವೆಲ್ ಈ ಹೇಳಿಕೆ ನೀಡಿರುವುದು ಗಮನಾರ್ಹ.
ಕಾಶ್ಮೀರ ವಿಷಯದ ಬಗ್ಗೆ ಮಾತುಕತೆ ಮುಂದುವರಿಸುವಂತೆ ಮುಷರ್ರಫ್ ಹಾಗೂ ವಾಜಪೇಯಿ ಅವರನ್ನು ನಾನು ಒತ್ತಾಯಿಸುತ್ತೇನೆ. ಉಭಯ ರಾಷ್ಟ್ರಗಳೂ ಗಡಿ ನಿಯಂತ್ರಣ ರೇಖೆಯನ್ನು ಗೌರವಿಸಬೇಕು ಎಂದು ಪೊವೆಲ್ ತಿಳಿಸಿದರು.
ಕಾಶ್ಮೀರ ವಿಷಯವೇ ಉಭಯ ರಾಷ್ಟ್ರಗಳ ನಡುವಣ ಮಾತುಕತೆಯ ಕೇಂದ್ರಬಿಂದು ಎನ್ನುವ ಪೊವೆಲ್ ಹೇಳಿಕೆ ಭಾರತಕ್ಕೆ ನಿರಾಶೆ ಮೂಡಿಸಿದೆ. ಪಾಕಿಸ್ತಾನದೊಂದಿಗಿನ ಮಾತುಕತೆಯಲ್ಲಿ ಕಾಶ್ಮೀರ ವಿಷಯ ಕೇಂದ್ರಬಿಂದುವಲ್ಲ ಎನ್ನುವುದು ಭಾರತದ ನಿಲುವು. ಇತರ ವಿಷಯಗಳೊಂದಿಗೆ ಕಾಶ್ಮೀರ ವಿಷಯವೂ ಒಂದೆಂದು ಭಾರತ ಮೊದಲಿನಿಂದಲೂ ಪ್ರತಿಪಾದಿಸುತ್ತಿದೆ.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications