ಮಹಿಳೆಯರ ಮಾರಾಟ! ಕಾಯ್ದೆಗೆ ತಿದ್ದುಪಡಿ ತಂದರೆ ನಿಂತೀತೆ?
ಬೆಂಗಳೂರು : ಕಾನೂನೆಂಬ ರಂಗೋಲಿಯಡಿ ತೂರುವ ಖದೀಮ ಕಳ್ಳರು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ , ಮಹಿಳೆಯರ ಅನೈತಿಕ ಮಾರಾಟ (ಪ್ರತಿಬಂಧಕಾ) ಕಾಯ್ದೆ (Immoral Trafficking in Women (Prevention)Act ) ಗೆ ತಿದ್ದುಪಡಿ ತರಲು ಕೇಂದ್ರ ಸರಕಾರ ಉದ್ದೇಶಿದೆ.
ಮಹಿಳೆಯರ ಅನೈತಿಕ ಮಾರಾಟ ಪ್ರತಿಬಂಧಕಾ ಕಾಯ್ದೆ ಇತ್ತೀಚಿನದೇನೂ ಅಲ್ಲ . 1980ರಲ್ಲೇ ಈ ಕಾಯ್ದೆ ಜಾರಿಗೆ ಬಂದಿದ್ದರೂ, ಪರಿಣಾಮಕಾರಿಯಾಗಿ ಜಾರಿಯಾದದ್ದು ಕಡಿಮೆ. ಕಾಯ್ದೆಯ ಉರುಳಿನಿಂದ ತಪ್ಪಿಸಿಕೊಳ್ಳುವ ಚಾಲಾಕಿಗಳಿಂದ ಹೊಸ ನಮೂನೆಯ ಅಪರಾಧಗಳು ಪತ್ತೆಯಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಭಾಗದ ಕಾರ್ಯದರ್ಶಿ ಡಾ. ಆರ್. ವಿ. ವೈದ್ಯನಾಥ ಅಯ್ಯರ್ ಕಾಯ್ದೆಯ ತಿದ್ದುಪಡಿ ಬಗೆಗೆ ಮಂಗಳವಾರ ಪಿಟಿಐಗೆ ತಿಳಿಸಿದ್ದಾರೆ.
ತಿದ್ದುಪಡಿ ಮಾಡುವುದರಿಂದ ವೇಶ್ಯಾವಾಟಿಕೆಗಾಗಿ ಮಹಿಳೆಯರನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಕಟ್ಟು ನಿಟ್ಟಾಗಿ ವಿರೋಧಿಸಲಾಗುತ್ತದೆ. ಕೇಂದ್ರ ಸರಕಾರವು ಕಾಯ್ದೆ ತಿದ್ದುಪಡಿಗೆ ಸಂಬಂಧ ಪಟ್ಟಂತೆ, ವಿವಿಧ ಕ್ಷೇತ್ರಗಳ ಎನ್ಜಿಒ ಪ್ರತಿನಿಧಿಗಳು ಸೇರಿದಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯಾಂದನ್ನು ರಚಿಸಿ, ಕ್ರಿಯಾ ಯೋಜನೆಯನ್ನು ರೂಪುಗೊಳಿಸುವಂತೆ ರಾಜ್ಯ ಸರಕಾರಗಳಿಗೆ ಸೂಚಿಸಿದೆ ಎಂದು ಅಯ್ಯರ್ ಹೇಳಿದರು.
ಮಕ್ಕಳು ಮತ್ತು ಮಹಿಳೆಯರ ಸಾಗಾಟ ತಡೆಗಟ್ಟುವ ಕುರಿತು ನಗರಲ್ಲಿ ನಡೆದ ಪ್ರಾದೇಶಿಕ ಕಾರ್ಯಾಗಾರವೊಂದರಲ್ಲೂ ವೈದ್ಯನಾಥ ಅಯ್ಯರ್ ಭಾಗವಹಿಸಿದ್ದರು. ಕಮ್ಮಟದಲ್ಲಿ ಮಾತನಾಡಿದ ಅಯ್ಯರ್, ಮಹಿಳೆಯರ ಸಾಗಾಣಿಕೆ ಸಮಸ್ಯೆಯು ಕಣ್ಣಿಗೆ ಕಾಣಿಸುತ್ತಿರುವುದಕ್ಕಿಂತಲೂ ಆಳವಾಗಿದೆ ಹಾಗೂ ತೀರಾ ಗಂಭೀರವಾಗಿದೆ ಎಂದರು.
ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೋಟಮ್ಮ , ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಎನ್. ಕೆ. ಜೈನ್ ಭಾಗವಹಿಸಿ ಸಮಸ್ಯೆ ವಿರುದ್ಧ ಹೋರಾಡುವಂತೆ ನಾಗರಿಕರಿಗೆ ಕರೆ ನೀಡಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications