‘ಸರ್ಕಾರಿ ಸ್ವಾಮ್ಯದ 15 ಉದ್ದಿಮೆಗಳಿಗೆ ಬೀಗ ಅಥವಾ ಖಾಸಗೀಕರಣ’
ಬೆಂಗಳೂರು :ರಾಜ್ಯ ಸರ್ಕಾರಿ ಸ್ವಾಮ್ಯದ ಸೊರಗುತ್ತಿರುವ ಉದ್ದಿಮೆಗಳನ್ನು ವಿಶ್ವಬ್ಯಾಂಕ್ ನೆರವು ಪಡೆದು ಪುನರುಜ್ಜೀವನಗೊಳಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಬುಧವಾರ ಪ್ರೆಸ್ ಕ್ಲಬ್ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಅವರು ಮಾತಾಡುತ್ತಿದ್ದರು. ಮಾರ್ಚ್ 31, 2002ರ ಹೊತ್ತಿಗೆ ಸರ್ಕಾರಿ ಸ್ವಾಮ್ಯದ 15 ಉದ್ದಿಮೆಗಳನ್ನು ಖಾಸಗೀಕರಣಗೊಳಿಸಲಾಗುವುದು ಅಥವಾ ಮುಚ್ಚಲಾಗುವುದು. ಈ ಪೈಕಿ ಈಗಾಗಲೇ ಎರಡು ಕಾರ್ಖಾನೆಗಳಿಗೆ ಬೀಗ ಬಿದ್ದಿದೆ ಎಂದರು.
ಒಂದು ಕಾಲದಲ್ಲಿ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಕಂಪನಿಯಾಗಿದ್ದ ಎನ್ಜಿಇಎಫ್ ಪುನರುಜ್ಜೀವನಕ್ಕೆ ಜಾಗತಿಕ ಮಟ್ಟದಲ್ಲಿ ಟೆಂಡರ್ ಕರೆಯಲಾಗಿದೆ. ಈಗ ಎನ್ಜಿಇಎಫ್ ಸಾಲ ರಹಿತ ಕಂಪನಿಯಾಗಿದೆ. ಮೈಸೂರು ಲ್ಯಾಂಪ್ಸ್ ಖಾಸಗೀಕರಣಗೊಳುಸುವ ಪ್ರಯತ್ನಗಳು ಕೂಡ ನಡೆದಿವೆ. ಸರ್ಕಾರ ರಚಿಸಿರುವ ಸಾರ್ವಜನಿಕ ಉದ್ದಿಮೆಗಳ ಪುನರ್ನಿರ್ಮಾಣ ಆಯೋಗದ ವರದಿ ಪರಿಶೀಲಿಸಿದ ನಂತರ ಇತರೆ ಉದ್ದಿಮೆಗಳ ಖಾಸಗೀಕರಣ ಅಥವಾ ಬೀಗ ಹಾಕುವ ಬಗ್ಗೆ ನಿರ್ಧರಿಸಲಾಗುವುದು ಎಂದು ದೇಶಪಾಂಡೆ ತಿಳಿಸಿದರು.
ಸರ್ಕಾರಕ್ಕೆ ವ್ಯಾಪಾರ ಮಾಡುವಂಥಾ ವ್ಯಾಪಾರಿ ಧೋರಣೆ ಇಲ್ಲವಾದ್ದರಿಂದ ಇನ್ನು ಮುಂದೆ ಯಾವುದೇ ಹೊಸ ಉದ್ದಿಮೆಯನ್ನು ಪ್ರಾರಂಭಿಸುವುದಿಲ್ಲ. ಬದಲಿಗೆ ರಫ್ತು ಹೆಚ್ಚಿಸುವ ಸಲುವಾಗಿ ಮಂಗಳೂರಿನಲ್ಲೊಂದು ಪಾರ್ಕ್, ಚೀನಾ ಮಾದರಿಯಲ್ಲಿ ಹಾಸನದಲ್ಲೊಂದು ಆರ್ಥಿಕ ವಲಯ, ಮಾಲೂರು ಹಾಗೂ ಬಾಗಲಕೋಟೆಯಲ್ಲಿ ಕೃಷಿ ಮತ್ತು ಆಹಾರ ಸಂಸ್ಕರಣಾ ಉದ್ದಿಮೆಗಳ ಪಾರ್ಕ್, ದೊಡ್ಡಬಳ್ಳಾಪುರ ಮತ್ತು ಬಳ್ಳಾರಿಯಲ್ಲಿ ಜವಳಿ ಉದ್ದಿಮೆಗಳ ಪಾರ್ಕ್ ಸ್ಥಾಪಿಸಲಾಗುವುದು ಎಂದರು.
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಕಬ್ಬಿಣ ಮತ್ತು ಉಕ್ಕು ಸಚಿವಾಲಯ ಜಂಟಿಯಾಗಿ ಬಳ್ಳಾರಿಯಲ್ಲಿ ಉಕ್ಕು ತಾಂತ್ರಿಕ ಸಂಸ್ಥೆಯನ್ನು ಪ್ರಾರಂಭಿಸುವ ಯೋಜನೆಯೂ ಇದೆ ಎಂದು ದೇಶಪಾಂಡೆ ಹೇಳಿದರು.
(ಪಿಟಿಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications