ಮದರಸಾ ವಿದ್ಯಾರ್ಥಿಗಳಿಗೊಂದಿಷ್ಟು ಗಣಿತ, ವಿಜ್ಞಾನ, ಸಮಾಜ ಪಾಠ
ಬೆಂಗಳೂರು : ಮದರಸಾದಲ್ಲಿ ಓದುತ್ತಿರುವ ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿಗೆ ಸೇರಿಸುವ ದೃಷ್ಠಿಯಿಂದ ಮದರಸಾ ಮಂಡಳಿ ಸ್ಥಾಪಿಸಲು ರಾಜ್ಯ ಸರಕಾರ ನಿರ್ಧರಿಸಿದೆ.
ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಮಂಗಳವಾರ ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದರು. ರಾಜ್ಯ ಸಚಿವ ಸಂಪುಟ ಮದರಸಾ ಮಂಡಳಿ ಸ್ಥಾಪಿಸುವ ಪ್ರಸ್ತಾವನೆಯನ್ನು ಒಪ್ಪಿದೆ. ಆದರೆ ಮಂಡಳಿ ಅನುಸರಿಸಬೇಕಾದ ನಿಯಮಾವಳಿಗಳನ್ನು ಇನ್ನೂ ಸಿದ್ಧಪಡಿಸಿಲ್ಲ. ವಕ್ಫ್ ಮಂಡಳಿ, ಸಮಾಜ ಕಲ್ಯಾಣ ಮತ್ತು ಶಿಕ್ಷಣ ಇಲಾಖೆ ವಿಭಾಗದ ಅಧಿಕಾರಿಗಳನ್ನು ಈ ಮಂಡಳಿಯ ಸದಸ್ಯರನ್ನಾಗಿ ನೇಮಿಸಿಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಮದರಸಾದಲ್ಲಿ ಓದುವ ಮಕ್ಕಳು ಅರೆಬಿಕ್, ಮತ್ತು ಇಸ್ಲಾಂ ಮತಕ್ಕೆ ಸಂಬಂಧಿಸಿದ ವಿಷಯಗಳನ್ನು ಮಾತ್ರ ಓದುತ್ತಾರೆ. ಮಂಡಳಿಯ ನಿಯಮಾವಳಿಯ ಅಡಿಯಲ್ಲಿ ಈ ವಿದ್ಯಾರ್ಥಿಗಳಿಗೆ ಇಂಗ್ಲಿಷ್, ಕನ್ನಡ, ಗಣಿತ ಮತ್ತು ವಿಜ್ಞಾನವನ್ನು ಕಲಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಮುಂದೆ ಸಮಾಜವನ್ನು ಎದುರಿಸುವುದು ಸುಲಭವಾಗುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ 371 ನೋಂದಾಯಿತ ಮದರಸಾಗಳಿವೆ. ಇದಲ್ಲದೆ ನೋಂದಾವಣೆ ಆಗದೇ ಇರುವ ಮದರಸಾಗಳು ಸಾಕಷ್ಟಿವೆ ಎಂದ ಸಚಿವರು, ಕಳೆದ ಒಂದುವರೆ ವರ್ಷಗಳಿಂದ 240 ಮದರಸಾಗಳಿಗೆ ಸರಕಾರ ಆರ್ಥಿಕ ಸಹಾಯ ನೀಡುತ್ತಿದೆ. ಪ್ರಸ್ತುತ ಮದರಸಾಗಳಿಗೆ ನೆರವು ನೀಡಲು ರಾಜ್ಯ 25 ಲಕ್ಷ ರೂಪಾಯಿಗಳನ್ನು ಎತ್ತಿಟ್ಟಿದೆ. ಮದರಸಾ ಶಾಲೆಗಳಲ್ಲಿ ಶಿಕ್ಷಣ ಮಟ್ಟವನ್ನು ಸುಧಾರಿಸುವುದರ ಜೊತೆಗೆ, ಸಂಸ್ಕೃತ ಶಾಲೆಗಳಲ್ಲಿಯೂ ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸರ್ಕಾರ ಸಹಕರಿಸಲಿದೆ ಎಂದರು.
ಕೇವಲ ಸಂಸ್ಕೃತ ಪಾಠ ನಡೆಯುವ ಶಾಲೆಗಳಿಗೆ ನೆರವು ನೀಡಲು ಕೇಂದ್ರವು 48 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಆದರೆ ರಾಜ್ಯದಲ್ಲಿರುವುದು ಬೆರಳೆಣಿಕೆಯಷ್ಟು ಸಂಸ್ಕೃತ ಶಾಲೆಗಳು ಮಾತ್ರ ಎಂದು ಸಚಿವರು ವಿಷಾದಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications