‘ಕಾಶ್ಮೀರ ವಿಷಯದಲ್ಲಿ ಮೂರನೆಯವರ ಮಧ್ಯಸ್ಥಿಕೆ ಭಾರತ ಒಪ್ಪದು’
ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವಣ ಬಾಂಧವ್ಯದಲ್ಲಿ ಕಾಶ್ಮೀರ ವಿಷಯವೇ ಕೇಂದ್ರ ಬಿಂದು ಎಂದು ಅಮೆರಿಕದ ವಿದೇಶಾಂಗ ಸಚಿವ ಕಾಲಿನ್ ಪೊವೆಲ್ ಇಸ್ಲಾಮಾಬಾದ್ನಲ್ಲಿ ನೀಡಿರುವ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಭಾರತಕ್ಕೆ ಆಗಮಿಸಿರುವ ಪೊವೆಲ್ ಅವರೊಂದಿಗೆ 50 ನಿಮಿಷಗಳ ಕಾಲ ಮಾತುಕತೆ ನಡೆಸಿದ ವಿದೇಶಾಂಗ ಸಚಿವ ಜಸ್ವಂತ್ ಸಿಂಗ್, ಕಾಶ್ಮೀರ ವಿಷಯದಲ್ಲಿ ಮುಷ್ರಫ್ ಅಭಿಪ್ರಾಯವನ್ನು ಬೆಂಬಲಿಸಿದ ಪೊವೆಲ್ ನಿಲುವಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ವಿದೇಶಾಂಗ ಇಲಾಖೆ ವಕ್ತಾರರಾದ ನಿರುಪಮಾ ರಾವ್ ತಿಳಿಸಿದ್ದಾರೆ.
ಭಾರತದ ಆದ್ಯತೆಯ ವಿಷಯಗಳಾವುವು ಎಂಬುದು ಅಮೆರಿಕಕ್ಕೇ ಚೆನ್ನಾಗಿ ತಿಳಿದಿದೆ ಎಂದು ಹೇಳಿದ ಜಸ್ವಂತ್ ಸಿಂಗ್, ಕಾಶ್ಮೀರ ವಿಷಯದಲ್ಲಿ ಮೂರನೆಯವರ ಮಧ್ಯಸ್ಥಿಕೆಯನ್ನು ಭಾರತ ಒಪ್ಪುವುದಿಲ್ಲ ಎಂಬುದನ್ನು ಪೊವೆಲ್ ಅವರಿಗೆ ಸ್ಪಷ್ಟಪಡಿಸಿದರು ಎಂದೂ ರಾವ್ ಹೇಳಿದ್ದಾರೆ.
ಬೆಂಬಲ : ಈ ಮಧ್ಯೆ ತಮ್ಮ 50 ನಿಮಿಷಗಳ ನೇರ ಭೇಟಿ ಹಂತದಲ್ಲಿ ಅಂತಾರಾಷ್ಟ್ರೀಯ ಭಯೋತ್ಪಾದನೆ ವಿರುದ್ಧ ನಡೆದಿರುವ ವಿಶ್ವಯುದ್ಧವನ್ನು ಬಲಪಡಿಸುವ ಬಗ್ಗೆ ಪರಸ್ಪರ ಒಪ್ಪಿಗೆ ಸೂಚಿಸಲಾಯಿತು. ಯುದ್ಧಾನಂತರ ಆಫ್ಘಾನಿಸ್ತಾನದಲ್ಲಿ ವಿಸ್ತುತ ಹಾಗೂ ಬಹು - ಜನಾಂಗೀಯ ಪ್ರಾತಿನಿಧ್ಯದ ಸರಕಾರ ರಚನೆ ಬಗ್ಗೆಯೂ ಚರ್ಚಿಸಲಾಯಿತು.
ಈ ಇಬ್ಬರು ನಾಯಕರ ನಡುವಿನ ನಿಯೋಗ ಮಟ್ಟದ ಮಾತುಕತೆ ಫಲಪ್ರದವಾಗಿದ್ದು, ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಬಲಗೊಂಡಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಬುಧವಾರ ಪೊವೆಲ್ ಹಾಗೂ ಗೃಹ ಸಚಿವ ಎಲ್.ಕೆ. ಆಡ್ವಾಣಿ ಅವರ ನಡುವೆ ಮಾತುಕತೆ ನಡೆಯಲಿದೆ.
(ಪಿ.ಟಿ.ಐ/ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications