ಅಕ್ಟೋಬರ್ 17ರ ಸಂಜೆ 6:58ಕ್ಕೆ ತಲಕಾವೇರಿಯಲ್ಲಿ ತೀರ್ಥೋದ್ಭವ
ಮೈಸೂರು : ಅಕ್ಟೋಬರ್ 17ರಂದು ತುಲಾಸಂಕ್ರಮಣ. ಭಾರತೀಯ ಕಾಲಮಾನದ ರೀತ್ಯ ಬುಧವಾರ ಸಂಜೆ 6:58ಕ್ಕೆ ಸರಿಯಾಗಿ ಮೇಷ ಲಗ್ನದಲ್ಲಿ ತಲಕಾವೇರಿಯ ಬ್ರಹ್ಮ ಕುಂಡಿಕೆಯಲ್ಲಿ ಪವಿತ್ರ ತೀರ್ಥೋದ್ಭವ ಆಗಲಿದೆ.
ದಕ್ಷಿಣದ ಗಂಗೆ ಎಂದೇ ಖ್ಯಾತವಾಗಿರುವ ಕಾವೇರಿಯ ಉಗಮಸ್ಥಾನವಾದ ತಲಕಾವೇರಿಯಲ್ಲಿ ತೀರ್ಥೋದ್ಭವವನ್ನು ನೋಡಲೆಂದು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಪ್ರತಿವರ್ಷ ಇಲ್ಲಿ ಸೂರ್ಯನು ತುಲಾ ರಾಶಿಗೆ ಪ್ರವೇಶಿಸುವ ಪುಣ್ಯಕಾಲದಲ್ಲಿ ತೀರ್ಥೋದ್ಭವ ಆಗುತ್ತದೆ.
ಈ ಹಿನ್ನೆಲೆಯಲ್ಲಿ ಕಾವೇರಿ ಜಾತ್ರೆ ಅಥವಾ ತುಲಾ ಸಂಕ್ರಮಣ ಜಾತ್ರೆ ಸೆ.26ರಿಂದಲೇ ಇಲ್ಲಿ ಆರಂಭವಾಗಿದೆ. ಕಾವೇರಿಯ ಪವಿತ್ರ ಸ್ನಾನಕ್ಕೆಂದು ಹಾಗೂ ಜಾತ್ರೆಗೆ ಆಗಮಿಸುವ ಯಾತ್ರಾರ್ಥಿಗಳಿಗೆ ಅನುಕೂಲಗಳನ್ನು ಕಲ್ಪಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.
ಭಾಗಮಂಡಲ , ತಲಕಾವೇರಿ ಮತ್ತು ಮಡಿಕೇರಿಯಲ್ಲಿ ಹಲವು ಸ್ವಯಂ ಸೇವಾ ಸಂಘಟನೆಗಳು ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪ್ರವಾಸಿಗರಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಿವೆ. ಕಾವೇರಿ ಜಾತ್ರೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿದೆ.
ತಲಕಾವೇರಿಯ ಅಗಸ್ತ್ಯೇಶ್ವರನ ದೇವಾಲಯದಲ್ಲಿ ಬುಧವಾರ ಬೆಳಗ್ಗಿನಿಂದಲೇ ವಿಶೇಷ ಪೂಜೆಗಳು ನಡೆಯುತ್ತಿವೆ. ತೀರ್ಥೋದ್ಭವ ವೀಕ್ಷಣೆಗೆ ಸುಮಾರು 50 ಸಾವಿರ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಕಳೆದ ವರ್ಷ ಅಕ್ಟೋಬರ್ 17ರಂದು ಮಧ್ಯಾಹ್ನ 12.31ಕ್ಕೆ ತಲಕಾವೇರಿಯ ತೀರ್ಥೋದ್ಭವ ಆಗಿತ್ತು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications