ರೈತರ ಬಗ್ಗೆ ಮೊಸಳೆ ಕಣ್ಣೀರು ಹರಿಸುವುದರಿಂದ ಪ್ರಯೋಜನವಿಲ್ಲ-ಕೃಷ್ಣ
ಬೆಂಗಳೂರು: ರೈತರ ಸಮಸ್ಯೆಗಳನ್ನೆಲ್ಲ ಸೆರಗಿನಲ್ಲಿ ಕಟ್ಟಿಕೊಂಡವರಂತೆ ವರ್ತಿಸುತ್ತಿರುವ ರಾಜ್ಯದ ಕೆಲವು ಮುಖಂಡರ ವರ್ತನೆಯ ಬಗ್ಗೆ ಮುಖ್ಯಮಂತ್ರಿ ಎಸ್. ಎಂ.ಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು , ಮೊಸಳೆ ಕಣ್ಣೀರು ಹರಿಸುವುದರಿಂದ ರೈತರ ಸಮಸ್ಯೆಗಳು ಬಗೆಹರಿಯುವುದಿಲ್ಲವೆಂದು ಅವರಿಗೆ ಕಿವಿಮಾತು ಹೇಳಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಪರೋಕ್ಷವಾಗಿ ಟೀಕಿಸಿದ ಮುಖ್ಯಮಂತ್ರಿ ಕೃಷ್ಣ , ರೈತರ ಸಮಸ್ಯೆಗಳ ತೀವ್ರತೆಯನ್ನು ಕಡಿಮೆ ಮಾಡಲು ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆ ಹೊರತು ಬರಿದೇ ಕಣ್ಣೀರು ಸುರಿಸುವುದರಿಂದ ಏನೂ ಪ್ರಯೋಜನವಿಲ್ಲ ಎಂದರು. ಎಪ್ಪತ್ತೆೈದನೇ ವರ್ಷಕ್ಕೆ ಕಾಲಿಟ್ಟ ಸಚಿವ ಎಚ್.ಕೆ.ರಂಗನಾಥ್ ಅವರನ್ನು ಅಭಿನಂದಿಸಲು ಭಾನುವಾರ ನಡೆದ ಅಮೃತ ಮಹೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ರೈತರ ಸಮಸ್ಯೆಗಳು ಹೆಚ್ಚುತ್ತಿವೆ. ಎಲ್ಲವನ್ನೂ ಸರ್ಕಾರ ಪರಿಹರಿಸಲು ಸಾಧ್ಯವಿಲ್ಲ . ಸೋವಿಯತ್ ಒಕ್ಕೂಟದ ವಿಭಜನೆಯಿಂದ ನಮ್ಮ ಕನಸುಗಳೆಲ್ಲ ಭಗ್ನವಾಗಿದ್ದು , ವಿಶ್ವದ ಆರ್ಥಿಕ ಸೂತ್ರಗಳಿಗೆ ಅನಿವಾರ್ಯವಾಗಿ ಬದ್ಧವಾಗಿರಬೇಕಾಗಿದೆ ಎಂದು ಕೃಷ್ಣ ವಿಷಾದ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅರಣ್ಯ ಸಚಿವ ರಂಗನಾಥ್ ನೀರಾ ಇಳಿಸಲು ಅನುಮತಿ ನೀಡದಿರುವ ಸರ್ಕಾರದ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು. ಕೆಲವು ಜನರ ಹಿತಾಸಕ್ತಿಗೋಸ್ಕರ ಬಹುಸಂಖ್ಯಾತರಿಗೆ ಹೆಂಡ ಕುಡಿಸಲು ಸಾಧ್ಯವಿಲ್ಲ ಎಂದ ರಂಗನಾಥ್, ತಿಳಿವಳಿಕೆಯುಳ್ಳ ನೀರಾದ ಬಗ್ಗೆ ಜನ ಜಾಗೃತಿ ಮೂಡಿಸಲು ಮುಂದಾಗಬೇಕೆಂದು ಕರೆ ನೀಡಿದರು.
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications