Get Updates
Get notified of breaking news, exclusive insights, and must-see stories!

ಹೊಸಪೇಟೆ ಬಂದ್‌ ನೂರಕ್ಕೆ ನೂರರಷ್ಟು ಯಶಸ್ವಿ, ಶಾಂತಿಯುತ

ಬಳ್ಳಾರಿ: ಹೊಸಪೇಟೆ ತಾಲ್ಲೂಕನ್ನು ಜಿಲ್ಲಾ ಕೇಂದ್ರವಾಗಿ ರೂಪಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಹೊಸಪೇಟೆ ಅಭಿವೃದ್ಧಿ ಪರ ಕ್ರಿಯಾ ಸಮಿತಿ ಅ.22 ರಂದು ನೀಡಿದ ಹೊಸಪೇಟೆ ಬಂದ್‌ ಕರೆಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು , ಬಂದ್‌ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಿದೆ.

ಸಣ್ಣಪುಟ್ಟ ಕಲ್ಲು ತೂರಾಟದ ಘಟನೆಗಳನ್ನು ಹೊರತುಪಡಿಸಿದರೆ ಬಂದ್‌ ಸಂಪೂರ್ಣ ಶಾಂತಿಯುತವಾಗಿತ್ತು . ಮುಚ್ಚಿದ ಅಂಗಡಿ ಮುಂಗಟ್ಟುಗಳು, ಬಿಕೋ ಎನ್ನುತ್ತಿದ್ದ ರಸ್ತೆಗಳ ದೃಶ್ಯ ಸಾಮಾನ್ಯವಾಗಿತ್ತು . ಖಾಸಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು . ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಸಂಚಾರವನ್ನು ನಿಲ್ಲಿಸಲಾಗಿತ್ತು . ಸರ್ಕಾರಿ ಕಚೇರಿಗಳು ಕೂಡ ಕಾರ್ಯ ನಿರ್ವಹಿಸಲಿಲ್ಲ .

ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೇರಿದಂತೆ ನೂರಾರು ಮಂದಿ ಮೆರವಣಿಗೆ ನಡೆಸಿದರು. ಪಟ್ಟಣದಲ್ಲಿನ ರಸ್ತೆಗಳೆಲ್ಲ ತಿಪ್ಪೇಗುಂಡಿಗಳಂತಾಗಿದ್ದು , ರಿಪೇರಿ ಕಾಮಗಾರಿಗಳನ್ನು ತಕ್ಷಣದಿಂದಲೇ ಕೈಗೆತ್ತಿಕೊಳ್ಳುವಂತೆ ಸರ್ಕಾರವನ್ನು ಚಳವಳಿಕಾರರು ಆಗ್ರಹಿಸಿದರು. ರಸ್ತೆಗಳನ್ನು ರಿಪೇರಿ ಮಾಡಿಸದಿದ್ದರೆ ರಾಜ್ಯೋತ್ಸವ ಆಚರಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ ಕನ್ನಡ ಸಂಘಟನೆಗಳು, ರಸ್ತೆ ರಿಪೇರಿ ಆಗುವವರೆಗೂ ಹೊಸಪೇಟೆಯನ್ನು ಹೊಲಸುಪೇಟೆ ಎಂದು ಕರೆಯುವುದಾಗಿ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+