ಸಮಾನತೆ ಮತ್ತು ಸ್ವಾತಂತ್ರ್ಯದತ್ತ ಒಂದು ಮಿಲಿಯನ್ ದಲಿತರು
ಬೆಂಗಳೂರು : ನವೆಂಬರ್ 4ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುವ ಸಾಮೂಹಿಕ ಮತಾಂತರ ಕಾರ್ಯಕ್ರಮದಲ್ಲಿ ಒಂದು ಮಿಲಿಯನ್ ದಲಿತರು ಬೌದ್ಧ ಧರ್ಮ ಕ್ಕೆ ಸೇರ್ಪಡೆಯಾಗಲಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಖಿಲಭಾರತ ಒಕ್ಕೂಟ ಮತ್ತು ಲಾರ್ಡ್ ಬುದ್ಧ ಕ್ಲಬ್ನ ಸಂಯುಕ್ತ ಆಶ್ರಯದಲ್ಲಿ ಈ ಮತಾಂತರ ಕಾರ್ಯಕ್ರಮ ನಡೆಯಲಿದೆ. ಹಿಂದು ಧರ್ಮ ಶತಮಾನಗಳಿಂದ ದಲಿತರನ್ನು ಶೋಷಣೆಗೀಡು ಮಾಡಿದೆ. ಈ ಧರ್ಮದಿಂದ ಹೊರ ಬರುವ ಮೂಲಕ ನಾವು ಮಾನವೀಯ ಗೌರವವನ್ನು ಪಡೆಯಲು ನಾವು ಯತ್ನಿಸುತ್ತಿದ್ದೇವೆ ಎಂದು ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ರಾಮ್ ರಾಜ್ ಮಂಗಳವಾರದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಸಾಮೂಹಿಕ ಮತಾಂತರ ಪ್ರಕ್ರಿಯೆಯನ್ನು ಸ್ವಾತಂತ್ರ್ಯ ಮತ್ತು ಸಮಾನತೆಯತ್ತ ತೆರಳುವ ದಾರಿ ಎಂದು ರಾಮ್ರಾಜ್ ಬಣ್ಣಿಸಿದ್ದಾರೆ. ಬೌದ್ಧ ಧರ್ಮವನ್ನು ಅವಲಂಬಿಸುವ ಮೂಲಕ ದಲಿತರ ಮಾನಸಿಕ ಚಿಂತನೆಗಳು ಬದಲಾಗಬಹುದು. ಐವತ್ತು ವರ್ಷಗಳ ಹಿಂದೆ ಭಾರತಕ್ಕೆ ಸ್ವಾತಂತ್ರ್ಯ ದೊರತಿದ್ದರೂ 250 ಮಿಲಿಯನ್ ದಲಿತರ ಬದುಕಿನಲ್ಲಿ ಬದಲಾವಣೆಯ ಗಾಳಿ ಬೀಸಿಲ್ಲ ಎಂದು ವಿಷಾದಿಸಿದ ರಾಮ್ರಾಜ್, ದಲಿತರ ಉದ್ಧಾರಕ್ಕಾಗಿ ರಾಜ್ಯ ಮತ್ತು ರಾಷ್ಟ್ರೀಯ ನೀತಿ ರೂಪಿಸಲು ಅಂಬೇಡ್ಕರ್ ಹೋರಾಟ ನಡೆಸಿದ್ದರು. ಆದರೆ ಆ ಎಲ್ಲ ಪ್ರಯತ್ನಗಳನ್ನು ಮೂಲೆಗೆ ತಳ್ಳಲಾಗಿದೆ ಎಂದರು.
ಬಾಲಂಗೋಚಿ: ಇದು ಬೌದ್ಧಧರ್ಮದ ಸುಗ್ಗಿಕಾಲವೇ ಇರಬೇಕು! ದೆಹಲಿಗೆ ಬೌದ್ಧರ ರಂಗೇರುವ ಮುನ್ನವೇ ಬೆಂಗಳೂರಿನಲ್ಲೂ ಅನೇಕರು ಬೌದ್ಧ ಧರ್ಮಕ್ಕೆ ಮತಾಂತರ ಹೊಂದಿದ್ದಾರೆ. ಸಂಖ್ಯೆ ದೊಡ್ಡದಲ್ಲದಿದ್ದರೂ, ಮತಾಂತರ ಹೊಂದಿವರ ಹೆಸರುಗಳು ದೊಡ್ಡವು. ಅವರ ಉದ್ದೇಶ ಸ್ವಾತಂತ್ರ್ಯ ಮತ್ತು ಸಮಾನತೆಯಲ್ಲ ; ನಗರಪಾಲಿಕೆ ಚುನಾವಣೆಗಳ ಮೀಸಲು ಸ್ಥಾನವನ್ನು ಹಿಂಬಾಗಿಲಿನಿಂದ ಪ್ರವೇಶಿಸುವುದು. ಅವಕಾಶವಾದಿ ಮತಾಂತರ ಎಂದರೆ ಇದುವೇನಾ?
(ಇನ್ಫೋ ವಾರ್ತೆ)
What do you feel?
ಮತಾಂತರದ ಬಗ್ಗೆ ಎಸ್.ಎಲ್.ಭೈರಪ್ಪನವರು ಏನು ಹೇಳುತ್ತಾರೆಂದರೆ...
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications