ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆ್ಯಂಥ್ರಾಕ್ಸ್‌ ಮುನ್ನೆಚ್ಚರಿಕೆ :ಕೋಲಾರದಲ್ಲಿ ಮಾಂಸದಂಗಡಿಗಳು ಬಂದ್‌

By Staff
|
Google Oneindia Kannada News

ಕೋಲಾರ : ಆ್ಯಂಥ್ರಾಕ್ಸ್‌ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ದೃಷ್ಠಿಯಿಂದ ಜಿಲ್ಲೆಯಲ್ಲಿ ಬುಧವಾರದಿಂದ ಎರಡು ದಿನಗಳ ಕಾಲ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಪೌರಾಡಳಿತ ಆದೇಶಿಸಿದೆ.

ಈ ವಿಷಯವನ್ನು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಪೌರ ಆಯುಕ್ತ ಸರ್‌ಫ್ರಾಜ್‌ಖಾನ್‌, ನಗರದಲ್ಲಿರುವ ಕಸಾಯಿಖಾನೆಗಳನ್ನು ಉತ್ತಮಪಡಿಸಲು, ಲಭ್ಯವಿರುವ ಸೌಲಭ್ಯಗಳನ್ನೇ ಉಪಯೋಗಿಸಿಕೊಂಡು ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಮಾಂಸಕ್ಕಾಗಿ ಉಪಯೋಗಿಸುವ ಶೇ.40ರಷ್ಟು ಪಶುಗಳಿಗೆ ಆ್ಯಂಥ್ರಾಕ್ಸ್‌ ರೋಗವಿರುವುದು ದೃಢಪಟ್ಟಿದೆ. ಆದ್ದರಿಂದ ಮಾಂಸದ ಮೂಲಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಎರಡು ದಿನಗಳ ಕಾಲ ಕಸಾಯಿಖಾನೆಗಳನ್ನು ಮುಚ್ಚಲು ನಿರ್ಧರಿಸಲಾಗಿದೆ.

ಜೊತೆಗೆ ಇಲ್ಲಿನ ಚಿಕ್ಕಬಳ್ಳಾಪುರ ರಸ್ತೆಯಲ್ಲಿ ಆಧುನಿಕ ಕಸಾಯಿ ಖಾನೆಯಾಂದನ್ನು ತೆರೆಯಲು 10 ಲಕ್ಷ ರೂಪಾಯಿಗಳ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಕಳುಹಿಸಲಾಗಿದೆ ಎಂದು ಸರ್‌ಫ್ರಾಜ್‌ಖಾನ್‌ ತಿಳಿಸಿದರು.

(ಇನ್ಫೋ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X