ಗಣರಾಜ್ಯೋತ್ಸಕ್ಕೆ ಮುನ್ನ ಕಾಕತಿಯಲ್ಲಿ ಕಿತ್ತೂರು ರಾಣಿಯ ವಿಗ್ರಹ
ಬೆಳಗಾವಿ : ಕಿತ್ತೂರು ರಾಣಿಯ ಹುಟ್ಟೂರಾದ ಕಾಕತಿಯಲ್ಲಿ ರಾಣಿ ಚೆನ್ನಮ್ಮ ವಿಗ್ರಹ ಸ್ಥಾಪನೆಗಾಗಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹ ಜಿಲ್ಲೆಯ ಆಡಳಿತ ಅಧಿಕಾರಿಗಳ ಭರವಸೆಯಾಂದಿಗೆ ಬುಧವಾರ ಅಂತ್ಯಗೊಂಡಿದೆ.
ಮುಂದಿನ ವರ್ಷದ ಗಣರಾಜ್ಯೋತ್ಸವಕ್ಕೆ ಮುನ್ನ ಕಾಕತಿ ಗ್ರಾಮದಲ್ಲಿ ರಾಣಿ ಚೆನ್ನಮ್ಮಳ ವಿಗ್ರಹ ಸ್ಥಾಪಿಸುವುದಾಗಿ ಜಿಲ್ಲಾಧಿಕಾರಿ ಅತುಲ್ ಕುಮಾರ್ ತಿವಾರಿ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅನಿಲ್ ಪೊಟ್ದರ್ ಬುಧವಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸತ್ಯಾಗ್ರಹವನ್ನು ನಿಲ್ಲಿಸಲಾಗಿದೆ.
ಅಖಿಲ ಭಾರತೀಯ ವೀರಶೈವ ಮಹಾಸಭಾ, ಜಿಲ್ಲೆಯ ವಿವಿಧ ಕನ್ನಡ ಸಂಘಟನೆಗಳು, ಎಐಎಸ್ಎಫ್ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾಕತಿಯಲ್ಲಿ ರಾಣಿ ಚೆನ್ನಮ್ಮಳ ವಿಗ್ರಹ ಸ್ಥಾಪಿಸಬೇಕೆಂದು ಸರಕಾರವನ್ನು ಆಗ್ರಹಿಸಿದ್ದವು. ರಾಣಿ ಚೆನ್ಮಮ್ಮ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿ, ಮುಂದಿನ ವಾರದೊಳಗಾಗಿ ಸಮಿತಿಯಾಂದನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಬುಧವಾರದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ರಾಣಿ ಚೆನ್ಮಮ್ಮಳ ತಂದೆ ದುಳಪ್ಪ ದೇಸಾಯಿ ಸಮಾಧಿಯ ಜೀರ್ಣೋದ್ಧಾರ, ಕಾಕತಿ ಕೈಗಾರಿಕಾ ಪ್ರದೇಶಕ್ಕೆ ರಾಣಿ ಚೆನ್ನಮ್ಮ ಕೈಗಾರಿಕಾ ಪ್ರದೇಶ ಎಂದು ಮರುನಾಮಕರಣ, ರಾಣಿ ಚೆನ್ನಮ್ಮಳ ಕೋಟೆಯ ಅಭಿವೃದ್ಧಿ, ಕಾಕತಿ ಗ್ರಾಮವನ್ನು ಪ್ರವಾಸೋದ್ಯಮ ಗ್ರಾಮವೆಂದು ಘೋಷಿಸಬೇಕೆಂಬ ಸ್ಥಳೀಯರ ಬೇಡಿಕೆ ಪ್ರಸ್ತುತ ಸರಕಾರದ ಮುಂದಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications