ಕೊಲ್ಲೂರಿನಲ್ಲಿ ವಿಜಯದಶಮಿಯಂದು ಕಂದಮ್ಮಗಳಿಗೆ ವಿದ್ಯಾರಂಭ
ಕೊಲ್ಲೂರು: ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ವಿಜಯ ದಶಮಿಯಂದು ನೂರಕ್ಕೂ ಹೆಚ್ಚು ಮಂದಿ ಮಕ್ಕಳಿಗೆ ವಿದ್ಯಾರಂಭ ಮಾಡಲಾಯಿತು.
ಶುಕ್ರವಾರ ಬೆಳಗಿನ ಜಾವ ಮೂರು ಗಂಟೆಗೇ ಮಕ್ಕಳಿಗೆ ದೇವಸ್ಥಾನದ ಸರಸ್ವತೀ ಮಂಟಪದಲ್ಲಿ ವಿದ್ಯಾರಂಭ ಕಾರ್ಯಕ್ರಮವನ್ನು ಆರಂಭಿಸಲಾಯಿತು. ‘ಸರಸ್ವತಿ ನಮಸ್ತುಭ್ಯಂ ವರದೆ ಕಾಮರೂಪಿಣಿ । ವಿದ್ಯಾರಂಭಂ ಕರಿಷ್ಯಾಮಿ ಸಿದ್ಧಿರ್ ಭವತು ಮೇ ಸದಾ।’ ಎಂಬ ಘೋಷದೊಂದಿಗೆ ಪುಟ್ಟ ಮಕ್ಕಳ ತೋರು ಬೆರಳಿನಲ್ಲಿ ಅಕ್ಕಿಯಲ್ಲಿ ಓಂಕಾರವನ್ನು ಬರೆಯುವ ಮೂಲಕ ವಿದ್ಯಾರಂಭ ಮಾಡಿದರು.
ದೇವಿಯ ಸಮ್ಮುಖದಲ್ಲಿ ಮಕ್ಕಳಿಗೆ ವಿದ್ಯಾರಂಭದ ಜೊತೆಗೆ ಇನ್ನೂ ಹಲವು ಮಕ್ಕಳಿಗೆ ಭತ್ತದ ಕದಿರು ಪೂಜೆ, ಕಣಜ ಪೂಜೆ, ನವಾನ್ನ ಪ್ರಾಶನ ಮಾಡಲಾಯಿತು. ಊರ ಹಾಗೂ ಪರವೂರ ಭಕ್ತರಿಗೆ ಹೊಸ ಅಕ್ಕಿ ಮತ್ತು ಕದಿರು ಹಂಚುವ ಕಾರ್ಯಕ್ರವನ್ನೂ ದೇವಳದ ದರ್ಮದರ್ಶಿಗಳು ನಡೆಸಿಕೊಟ್ಟರು.
ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಮತ್ತಿತರ ಪ್ರದೇಶಗಳಿಂದ ಸಾವಿರಾರು ಮಂದಿ ಭಕ್ತರು ಮೂಕಾಂಬಿಕೆ ದರ್ಶನಕ್ಕೆ ಆಗಮಿಸಿದ್ದರು. ನಟಿ ಜಯಭಾರತಿಯೂ ವಿಜಯ ದಶಮಿಯ ಪ್ರಯುಕ್ತ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications