Get Updates
Get notified of breaking news, exclusive insights, and must-see stories!

ಚಿಕ್ಕಮಗಳೂರು ಬಳಿ ಬಸ್‌ -- ವ್ಯಾನ್‌ ಡಿಕ್ಕಿ 4 ಜನರ ಸಾವು

ಬೆಂಗಳೂರು : ಬೀರೂರು - ಕಡೂರು ರಸ್ತೆಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮದುವೆ ದಿಬ್ಬಣದ ನಾಲ್ವರು ಮೃತಪಟ್ಟಿದ್ದಾರೆ. ಮದುವೆಯ ದಿಬ್ಬಣ ಪ್ರಯಾಣಿಸುತ್ತಿದ್ದ ವ್ಯಾನ್‌ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ನಡುವೆ ನಡೆದ ಡಿಕ್ಕಿಯಿಂದ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು ಮದುವೆಯ ಕಾರ್ಯಕ್ರಮವೊಂದಲ್ಲಿ ಪಾಲ್ಗೊಳ್ಳುವ ಸಲುವಾಗಿ ಟಾಟಾ ಸುಮೋದಲ್ಲಿ ಬಾಗಲಕೋಟೆಯಿಂದ - ಮಡಿಕೇರಿ ಜಿಲ್ಲೆಯ ಕುಶಾಲನಗರಕ್ಕೆ ಹೋಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ದುರ್ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದು, ಅವರನ್ನು ಬೀರೂರು ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

ಈ ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಪದ್ಮಾವತಿ (55), ನಂದಾ ಉರುಫ್‌ ಮಲ್ಲಿಕಾರ್ಜುನ (28), ರಾಮಚಂದ್ರ (50), ದತ್ತಾತ್ರೇಯ (65) ಎಂದು ಗುರುತಿಸಲಾಗಿದೆ. ಬೀರೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

(ಪಿ.ಟಿ.ಐ/ಇನ್‌ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+